ಹೊಗೆನಕಲ್‌ನಲ್ಲಿ ಬೋಟಿಂಗ್ ಸ್ಥಗಿತ: ಪ್ರವಾಸಿಗರಿಗೆ ನೋ ಎಂಟ್ರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕೆಆರ್‌ಎಸ್‌ನಿಂದ ಒಂದೂವರೆ ಲಕ್ಷ ಕ್ಯುಸೆಕ್‌ ನೀರನ್ನು ನದಿಗೆ ಹರಿಸಿದ್ದರಿಂದ ಚಾಮರಾಜನಗರ ಜಿಲ್ಲೆಯ ಕರ್ನಾಟಕ ತಮಿಳುನಾಡು ಗಡಿ ಹೊಗೆನಕಲ್‌ನಲ್ಲಿ ಕಾವೇರಿ ಮೈದುಂಬಿ ಹರಿಯುತ್ತಿದ್ದಾಳೆ.

Hogenakkal boating man and tourist guide in Oottamalai,Dharmapuri - Best  Tourist Guide Services in Dharmapuri - Justdial

ಹೊಗೆನಕಲ್ ಮೂಲಕ ಕಾವೇರಿ ನೀರು ಮೆಟ್ಟೂರು ಡ್ಯಾಂ ಸೇರುತ್ತಿದ್ದಾಳೆ. ನೀರಿನ ರಭಸಕ್ಕೆ ಕಲ್ಲು, ಗುಡ್ಡ, ಜಲಪಾತಗಳು ಕೂಡ ಮುಳುಗಡೆಯಾಗಿವೆ. ಈ ಹಿನ್ನೆಲೆ ದೋಣಿ ವಿಹಾರ ಸ್ಥಗಿತಗೊಳಿಸಲಾಗಿದೆ. ಅಲ್ಲದೇ ಮುನ್ನೆಚ್ಚರಿಕೆ ಕ್ರಮವಾಗಿ ಹೊಗೆನಕಲ್‌ ಭೇಟಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.

File:Parisal Boating in Hogenakkal falls in tamil nadu.jpg - Wikimedia  Commons

ನೀರು ರಭಸವಾಗಿ ಹರಿಯುತ್ತಿರುವ ಹಿನ್ನಲೆ ಜಲಪಾತಗಳು ಕಣ್ಮರೆಯಾಗಿವೆ. ಕರ್ನಾಟಕ  ಅಷ್ಟೇ ಅಲ್ಲದೇ ತಮಿಳುನಾಡಿನಲ್ಲೂಕೂಡ ದೋಣಿ ವಿಹಾರ ಸ್ಥಗಿತಗೊಳಿಸಲಾಗಿದೆ. ಹೊಗೆನಕಲ್‌ನತ್ತ ಬರುವ ಪ್ರವಾಸಿಗರನ್ನು ಅರಣ್ಯ ಇಲಾಖೆ ಸಿಬ್ಬಂದಿ ತಡೆದು ವಾಪಸ್ ಕಳುಹಿಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!