ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಸ್ಥಾನದ ಮೆಹಂದಿಪುರದ ಬಾಲಾಜಿ ಪಟ್ಟಣದ ಧರ್ಮಶಾಲಾ ಅತಿಥಿಗೃಹದಲ್ಲಿ ಕುಟುಂಬದ ನಾಲ್ವರು ಸದಸ್ಯರು ಶವವಾಗಿ ಪತ್ತೆಯಾಗಿದ್ದಾರೆ. ಮೃತರಲ್ಲಿ ಪೋಷಕರು, ಮಗ ಮತ್ತು ಮಗಳು ಸೇರಿದ್ದಾರೆ, ಅವರೆಲ್ಲರೂ ಉತ್ತರಾಖಂಡದ ಡೆಹ್ರಾಡೂನ್ನ ರಾಯ್ಪುರ ಪ್ರದೇಶದವರಾಗಿದ್ದರು. ಇದು ಕೊಲೆಯಾ ಅಥವಾ ಸೂಸೈಡ್ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಜನವರಿ 12ರಂದು ಸಮಾಧಿ ವಾಲಿ ಗಲಿಯ ರಾಧಾ-ಕೃಷ್ಣ ಆಶ್ರಮ ಧರ್ಮಶಾಲಾದಲ್ಲಿ ಕೊಠಡಿಯನ್ನು ಬಾಡಿಗೆಗೆ ಪಡೆದಿದ್ದರು ಮತ್ತು ಜನವರಿ 14 ರಂದು ಮಧ್ಯಾಹ್ನ ಚೆಕ್ ಔಟ್ ಮಾಡಲು ನಿರ್ಧರಿಸಿದ್ದರು.
ಸಂಜೆ ಗೃಹರಕ್ಷಕ ಸಿಬ್ಬಂದಿ ಕೊಠಡಿಗೆ ತಲುಪಿದಾಗ ಯಾವುದೇ ಚಟುವಟಿಕೆ ಗಮನಕ್ಕೆ ಬಂದಿಲ್ಲ ಮತ್ತು ಯಾರೂ ಸ್ಪಂದಿಸಲಿಲ್ಲ. ಸಿಬ್ಬಂದಿ ಮ್ಯಾನೇಜರ್ಗೆ ಮಾಹಿತಿ ನೀಡಿದ್ದು, ಅವರು ಪರಿಶೀಲಿಸಲು ಹೋದಾಗ ಕೊಠಡಿಯೊಳಗೆ ನಾಲ್ಕು ಮೃತದೇಹಗಳು ಬಿದ್ದಿರುವುದು ಕಂಡಿತ್ತು. ಮಾಹಿತಿ ಪಡೆದ ಬಾಲಾಜಿ ಪೊಲೀಸರು ಹಾಗೂ ತೋಡಭೀಮ್ ಠಾಣೆ ಪ್ರಭಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿದರು.
ಘಟನಾ ಸ್ಥಳದಲ್ಲಿನ ಪ್ರಾಥಮಿಕ ಅವಲೋಕನಗಳ ಆಧಾರದ ಮೇಲೆ ಇಬ್ಬರ ಶವ ನೆಲದ ಮೇಲೆ ಮಲಗಿರುವ ರೀತಿ ಇತ್ತು, ಇನ್ನಿಬ್ಬರ ಶವ ಹಾಸಿಗೆಯ ಮೇಲೆ ಪತ್ತೆಯಾಗಿವೆ. ವಿಷ ಕುಡಿದು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಮರಣೋತ್ತರ ಪರೀಕ್ಷೆಯ ವರದಿಯ ನಂತರ ಸಾವಿಗೆ ನಿಖರ ಕಾರಣವನ್ನು ನಿರ್ಧರಿಸಲಾಗುವುದು. ಆದರೆ ಸಾವಿನ ಹಿಂದಿರುವ ಸ್ಪಷ್ಟ ಕಾರಣದ ಬಗ್ಗೆ ಇನ್ನೂ ತನಿಖೆ ನಡೆಯುತ್ತಿದೆ.