ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾಕುಂಭದ ಕಾಲ್ತುಳಿತದಲ್ಲಿ ಮೃತಪಟ್ಟವರ ಶವಗಳನ್ನು ನದಿಗೆ ಎಸೆಯಲಾಗಿದೆ. ಇದರಿಂದಾಗಿ ನೀರು ಇನ್ನಷ್ಟು ಕಲುಷಿತವಾಗಿದೆ ಎಂದು ಜಯಾ ಬಚ್ಚನ್ ಗಂಭೀರ ಆರೋಪ ಮಾಡಿದ್ದಾರೆ.
ಗಂಗಾ ನೀರು ಅತ್ಯಂತ ಕಲುಷಿತವಾಗಿದೆ. ಈಗ ದೇಶದ ಅತ್ಯಂತ ಕಲುಷಿತ ನೀರು ಎಲ್ಲಿದೆ? ಎಂಬ ಪ್ರಶ್ನೆಯನ್ನು ಯಾರನ್ನೇ ಕೇಳಿದರೂ ಅದಕ್ಕೆ ಉತ್ತರ ಮಹಾಕುಂಭದಲ್ಲಿದೆ ಎಂಬ ಉತ್ತರ ಬರುತ್ತದೆ. ಕಾಲ್ತುಳಿತದಲ್ಲಿ ಮೃತಪಟ್ಟವರ ಶವಗಳನ್ನು ನದಿಗೆ ಎಸೆಯಲಾಗಿದೆ. ಇದರಿಂದಾಗಿ ನೀರು ಇನ್ನಷ್ಟು ಕಲುಷಿತವಾಗಿದೆ ಎಂದು ಹೇಳಿದ್ದಾರೆ.
ಮಹಾಕುಂಭ ನಡೆಯುತ್ತಿರುವ ಸ್ಥಳದ ನಿಜವಾದ ಸಮಸ್ಯೆಗಳನ್ನು ಪರಿಹರಿಸುತ್ತಿಲ್ಲ. ಮಹಾಕುಂಭಕ್ಕೆ ಭೇಟಿ ನೀಡುವ ಸಾಮಾನ್ಯ ಜನರಿಗೆ ಯಾವುದೇ ವಿಶೇಷ ಚಿಕಿತ್ಸೆ ಸಿಗುತ್ತಿಲ್ಲ. ಅವರಿಗೆ ಸರಿಯಾದ ಯಾವುದೇ ವ್ಯವಸ್ಥೆ ಇಲ್ಲ. 34ಕ್ಕೂ ಹೆಚ್ಚು ಕೋಟಿ ಜನರು ಮಹಾಕುಂಭಕ್ಕೆ ಭೇಟಿ ನೀಡಿದ್ದಾರೆ ಎಂದು ಉತ್ತರ ಪ್ರದೇಶ ಸರ್ಕಾರ ಸುಳ್ಳು ಹೇಳುತ್ತಿದೆ. ಒಂದು ಸ್ಥಳದಲ್ಲಿ ಇಷ್ಟೊಂದು ದೊಡ್ಡ ಸಂಖ್ಯೆಯ ಜನರು ಹೇಗೆ ಸೇರಲು ಸಾಧ್ಯ? ಎಂದು ಜಯಾ ಬಚ್ಚನ್ ಪ್ರಶ್ನಿಸಿದ್ದಾರೆ.