ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡದ ಬಿಜೆಪಿ ನಾಯಕನ ಪುತ್ರ ಪುಲ್ಕಿತ್ ಆರ್ಯ ಒಡೆತನದ ಖಾಸಗಿ ರೆಸಾರ್ಟ್ನಲ್ಲಿ 19 ವರ್ಷದ ಯುವತಿಯ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಲ್ಕಿತ್ ಆರ್ಯ ಸೇರಿದಂತೆ ಮೂವರನ್ನು ಪೋಲೀಸರು ಬಂಧಿಸಿದ್ದು ಯುವತಿಯ ಮೃತ ದೇಹ ರೆಸಾರ್ಟ್ ಆವರಣದಲ್ಲಿಯೇ ಪತ್ತೆಯಾಗಿದೆ ಎಂದು ಮೂಲಗಳು ವರದಿ ಮಾಡಿವೆ. ಮೃತ 19 ವರ್ಷದ ಯುವತಿ ಸ್ವಾಗತಕಾರಿಣಿಯಾಗಿ ಕೆಲಸ ಮಾಡುತ್ತಿದ್ದಳು ಎನ್ನಲಾಗಿದೆ.
ವೈಯಕ್ತಿಕ ವಿವಾದದ ಹಿನ್ನೆಲೆಯಲ್ಲಿ ಆಕೆಯನ್ನು ರೆಸಾರ್ಟ್ ಬಳಿಯ ನೀರಿನ ಕಾಲುವೆಗೆ ತಳ್ಳಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ.
ಶನಿವಾರ ಬೆಳಗ್ಗೆ ಪೊಲೀಸರಿಗೆ ಚಿಲ್ಲಾ ಪವರ್ ಹೌಸ್ ಬಳಿ ಮಹಿಳೆಯ ಶವ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.