ವಿಜಯಪುರದ ಬಬಲೇಶ್ವರ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಕೃಷ್ಣನಗರದಲ್ಲಿರುವ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಮತ್ತೊಂದು ಬಾಯ್ಲರ್ ಸ್ಫೋಟಗೊಂಡಿದೆ.

ಅದೃಷ್ಟವಶಾತ್ ಕಾರ್ಮಿಕರಿಗೆ ಯಾವುದೇ ಗಾಯಗಳಾಗಿಲ್ಲ. 15 ಮಂದಿ ನೌಕರರು ಬೆಳಗ್ಗೆ ಚಹಾ ಕುಡಿಯಲು ಹೋದಾಗ ಬಾಯ್ಲರ್ ಸ್ಫೋಟಗೊಂಡಿದೆ. ಸಕಾಲದಲ್ಲಿ ಕಾರ್ಮಿಕರು ಪಾರಾದ ಕಾರಣ ಭಾರೀ ಅನಾಹುತ ತಪ್ಪಿದೆ.

ಘಟನೆ ಕುರಿತು ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!