ಹೊಸದಿಗಂತ ವರದಿ, ವಿಜಯಪುರ:
ಹತ್ತಿ ಬಿಡಿಸಲು ಕೂಲಿ ಕಾರ್ಮಿಕರನ್ನು ಕರೆದುಕೊಂಡು ತೆರಳುತ್ತಿದ್ದ ಬೊಲೆರೋ ಪಿಕಪ್ ವಾಹನ ಪಲ್ಟಿಯಾಗಿ ಓರ್ವ ಮಹಿಳೆ ಸಾವಿಗೀಡಾಗಿದ್ದು, 14 ಕಕ್ಕೂ ಹೆಚ್ಚು ಕಾರ್ಮಿಕರು ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ತಾಳಿಕೋಟೆ ಪಟ್ಟಣದ ಬಳಿ ನಡೆದಿದೆ.
ಮೃತಪಟ್ಟವಳನ್ನು ಕಲ್ಪನಾ ಎಂದು ಗುರುತಿಸಲಾಗಿದೆ.
ಬಿಳೇಭಾವಿ ಗ್ರಾಮದಿಂದ ತುಂಬಗಿ ಗ್ರಾಮಕ್ಕೆ ಕಾರ್ಮಿಕರನ್ನು ಹತ್ತಿ ಬಿಡಿಸಲು ವಾಹನದಲ್ಲಿ ಕರೆದುಕೊಂಡು ಹೋಗುತ್ತಿರುವ ಸಂದರ್ಭ ವಾಹನದ ಜಾಯಿಂಟ್ ಕಟ್ ಆಗಿರುವ ಪರಿಣಾಮ ಈ ಘಟನೆ ನಡೆದಿದೆ.
ಗಾಯಾಳುಗಳಿಗೆ ತಾಳಿಕೋಟೆ ಪಟ್ಟಣದ ಸಮುದಾಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ತಾಳಿಕೋಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.