ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕಾಲೋನಿ ಗೇಟ್ ಬಳಿ ಬೊಲೆರೊ ಪಲ್ಟಿಯಾಗಿ ಮೂವರು ಕಾರ್ಮಿಕರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.
ಆಂಧ್ರದ ಮುನಿಯಮ್ಮ, ವೆಂಕಟಪ್ಪ ಹಾಗೂ ಮತ್ತೊಬ್ಬರು ಮೃತಪಟ್ಟಿದ್ದಾರೆ.
ಹುಣಸೆಹಣ್ಣು ಬಿಡಿಸುವ ಕೆಲಸ ಮುಗಿಸಿಕೊಂಡು ಹೋಗುವಾಗ ದುರಂತ ಸಂಭವಿಸಿದೆ. 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಶ್ರೀನಿವಾಸಪುರ ಮತ್ತು ಆಂಧ್ರದ ಮದನಪಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



