ಶಿವಲಿಂಗ ತಬ್ಬಿಕೊಂಡಿದ್ದಕ್ಕೆ ಕಿರಿಕ್: ಸ್ಪಷ್ಟನೆ ನೀಡಿದ್ರು ಬಾಲಿವುಡ್ ನಟ ಅಕ್ಷಯ್ ಕುಮಾರ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಹೊಸ ಸಿನಿಮಾದ ‘ಮಹಾಕಾಲ್ ಚಲೋ’ ಹಾಡನ್ನು ಬಿಡುಗಡೆ ಮಾಡಿದರು. ಇದೀಗ ಈ ಸಾಂಗ್ ನೋಡಿದ ಕೆಲವರು ತಕರಾರು ತೆಗೆದಿದ್ದಾರೆ .

ಇದಕ್ಕೆ ಇದೀಗ ಅಕ್ಷಯ್ ಕುಮಾರ್​ ಸ್ಪಷ್ಟನೆ ನೀಡಿದ್ದು, ಶಿವಲಿಂಗವನ್ನು ತಬ್ಬಿಕೊಂಡಿದ್ದರಲ್ಲಿ ತಮ್ಮ ತಪ್ಪು ಏನೂ ಇಲ್ಲ ಎಂದು ಅವರು ಹೇಳಿದ್ದಾರೆ.

‘ಮಹಾಕಾಲ್ ಚಲೋ’ ಹಾಡಿನಲ್ಲಿ ಅಕ್ಷಯ್ ಕುಮಾರ್​ ಅವರು ಶಿವಲಿಂಗವನ್ನು ತಬ್ಬಿಕೊಂಡಿದ್ದಾರೆ. ಈ ಹಾಡು ನೋಡಿದ ಅರ್ಚಕರ ಒಕ್ಕೂಟವು ಆಕ್ಷೇಪ ವ್ಯಕ್ತಪಡಿಸಿದೆ. ಹಾಡು ಚೆನ್ನಾಗಿದೆ, ಆದರೆ ಅಕ್ಷಯ್ ಕುಮಾರ್​ ಅವರು ಶಿವಲಿಂಗವನ್ನು ತಬ್ಬಿಕೊಂಡಿದ್ದು ಸರಿಯಲ್ಲ ಎಂದು ಹೇಳಿದ್ದರು. ಜೊತೆಗೆ ಈ ಹಾಡಿನಲ್ಲಿ ಭಸ್ಮವನ್ನು ಬಳಸಿದ ವಿಧಾನ ಕೂಡ ತಪ್ಪಾಗಿದೆ ಎಂದು ಹೇಳಲಾಯಿತು.

ಇತ್ತೀಚೆಗೆ ಅವರು ‘ಕಣ್ಣಪ್ಪ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಚಾರದ ಬಗ್ಗೆ ಮಾತನಾಡಿದರು. ಈ ಚಿತ್ರದಲ್ಲಿ ಕೂಡ ಅಕ್ಷಯ್ ಕುಮಾರ್ ಅವರು ಶಿವನ ಪಾತ್ರ ಮಾಡಿದ್ದಾರೆ. ‘ಬಾಲ್ಯದಿಂದಲೂ ದೇವರೇ ನಮ್ಮ ತಂದೆ-ತಾಯಿ ಎಂಬುದನ್ನು ಪೋಷಕರು ನಮಗೆ ಹೇಳಿಕೊಟ್ಟಿದ್ದಾರೆ. ನಿಮ್ಮ ಪೋಷಕರನ್ನು ನೀವು ತಬ್ಬಿಕೊಂಡರೆ ಅದರಲ್ಲಿ ತಪ್ಪೇನಿದೆ’ ಎಂದು ಅಕ್ಷಯ್ ಕುಮಾರ್​ ಅವರು ಮರುಪ್ರಶ್ನೆ ಹಾಕಿದ್ದಾರೆ.

ನನಗೆ ದೇವರಿಂದ ಶಕ್ತಿ ಬರುತ್ತದೆ. ಯಾರಾದರೂ ನನ್ನ ಭಕ್ತಿಯನ್ನು ತಪ್ಪಾಗಿ ಅರ್ಥ ಮಾಡಿಕೊಂಡರೆ ಅದರಲ್ಲಿ ನನ್ನ ತಪ್ಪು ಏನೂ ಇಲ್ಲ ಎಂದು ಅಕ್ಷಯ್ ಕುಮಾರ್ ಹೇಳಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!