ಹೊಸದಿಗಂತ ಡಿಜಿಟಲ್ ಡೆಸ್ಕ್
ಪಂಜಾಬ್ ಗಾಯಕ ಸಿಧು ಮೂಸೆ ವಾಲಾರ ಮೇಲೆ ಗುಂಡಿನ ದಾಳಿ ಮಾಡಿ ಹತ್ಯೆಗೈದ ಘಟನೆ ಮಾಸುವ ಮುನ್ನವೇ ಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಅವರಿಗೆ ಜೀವ ಬೆದರಿಕೆ ಪತ್ರ ಬಂದಿದೆ. ಮುಂಬೈ ಬಾಂದ್ರಾ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಇಂದು ಮುಂಜಾನೆ ಬಾಂದ್ರಾ ಬ್ಯಾಂಡ್ ಸ್ಟ್ಯಾಂಡ್ ವಾಯುವಿಹಾರದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ಗೆ ಬೆದರಿಕೆ ಹಾಕುವ ಅನಾಮಧೇಯ ಪತ್ರವೊಂದು ಪತ್ತೆಯಾಗಿದೆ.
ಸಲೀಂ ಖಾನ್ ಬೆಳಗಿನ ನಡಿಗೆಯ ನಂತರ ವಿರಾಮ ತೆಗೆದುಕೊಳ್ಳುವ ಸ್ಥಳದಲ್ಲಿ ಅವರ ಕಾವಲುಗಾರರಿಗೆ ಪತ್ರ ಕಂಡುಬಂದಿದೆ. ಇದೀಗ ಬಾಂದ್ರಾ ಪೊಲೀಸರು ಅಪರಿಚಿತರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.