3 ದಶಕದ ಬಳಿಕ ಜೈಲಿನಿಂದ ಬಿಡುಗಡೆಗೊಂಡ ರಾಜೀವ್ ಗಾಂಧಿ ಹತ್ಯೆ ಅಪರಾಧಿ ನಳಿನಿ ಶ್ರೀಹರನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆ ಮಾಡಿದ ಹಂತಕರನ್ನು ಬಿಡುಗಡೆಗೊಳಿಸಿ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶವನ್ನು ನೀಡಿತ್ತು. ಇದೀಗ ಇಂದು ರಾಜೀವ್ ಗಾಂಧಿ ಹತ್ಯೆ ಅಪರಾಧಿ ನಳಿನಿ ಶ್ರೀಹರನ್​ನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಗೆ ಸಂಬಂಧಿಸಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಗಳಾದ ನಳಿನಿ ಶ್ರೀಹರನ್ ಮತ್ತು ಆರ್‌ಪಿ ರವಿಚಂದ್ರನ್ ಅವರನ್ನು ಅವಧಿಗೂ ಮೊದಲೇ ಬಿಡುಗಡೆ ಮಾಡುವಂತೆ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಶಿಫಾರಸು ಮಾಡಿತ್ತು.

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರು ಅಪರಾಧಿಗಳನ್ನ 31 ವರ್ಷಗಳ ಜೈಲುವಾಸದ ನಂತರ ಬಿಡುಗಡೆ ಮಾಡುವಂತೆ ನಿನ್ನ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಈ ಆದೇಶದ ಬಳಿಕ ಇಂದು ತಮಿಳುನಾಡಿನ ಜೈಲಿನಲ್ಲಿದ್ದಂತ ರಾಜೀವ್ ಗಾಂಧಿ ಹಂತಕರಾದಂತ ನಳಿನಿ ಶ್ರೀಹರಿಹರನ್, ರವಿಚಂದ್ರನ್, ಸಂತನ್, ಮುರುಗನ್, ಜೈಕುಮಾರ್, ರಾಬರ್ಟ್ ಪೈಸ್ ಸೇರಿ ಆರು ಆರೋಫಿಗಳನ್ನು ರಿಲೀಸ್ ಮಾಡಲಾಗಿದೆ.

1991ರ ಮೇ 21ರ ರಾತ್ರಿ ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಚುನಾವಣಾ ರ್ಯಾಲಿಯಲ್ಲಿ ಧನು ಎಂಬ ಮಹಿಳಾ ಆತ್ಮಾಹುತಿ ಬಾಂಬರ್‌ ಮಾಜಿ ಪ್ರಧಾನಿ ರಾಜೀವ್ ಗಾಂಧಿಯನ್ನು ಹತ್ಯೆ ಮಾಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!