SHOCKING| ಬಿಜೆಪಿ ನಾಯಕಿ ಪುತ್ರನ ಕಾರಿನ ಮೇಲೆ ಅಪರಿಚಿತರಿಂದ ಬಾಂಬ್ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಬಿಜೆಪಿ ಮುಖಂಡರೊಬ್ಬರ ಪುತ್ರ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಆರು ಮಂದಿ ದುಷ್ಕರ್ಮಿಗಳು ಎರಡು ಬಾಂಬ್‌ಗಳನ್ನು ಎಸೆದಿದ್ದಾರೆ. ಈ ಕಾರು ಬಿಜೆಪಿ ನಾಯಕಿ ವಿಜಯಲಕ್ಷ್ಮಿ ಚಂದೇಲ್ ಅವರ ಪುತ್ರ ವಿಧಾನ್ ಸಿಂಗ್ ಅವರಿಗೆ ಸೇರಿದ್ದಾಗಿದೆ. ಎರಡು ಬೈಕ್‌ಗಳಲ್ಲಿ ಬಂದ ಆರು ಮಂದಿ ಮುಸುಕುಧಾರಿಗಳು ಕಾರಿನ ವಿಂಡ್‌ಶೀಲ್ಡ್‌ಗೆ ಎರಡು ಬಾಂಬ್‌ಗಳನ್ನು ಎಸೆದಿದ್ದಾರೆ. ಪೊಲೀಸರು ಬರುವ ಮುನ್ನವೇ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ವಿಧಾನ್ ಸಿಂಗ್ (20) ತನ್ನ ಚಿಕ್ಕಮ್ಮನ ಮನೆಗೆ ತೆರಳುತ್ತಿದ್ದ ವೇಳೆ ದಾಳಿ ನಡೆದಿದೆ. ಆದಾಗ್ಯೂ, ವಿಧಾನ್ ಸಿಂಗ್ ಮತ್ತು ಅವರ ಸಹಚರರು ದಾಳಿಯಲ್ಲಿ ಯಾವುದೇ ಹಾನಿಯಾಗದಂತೆ ಬದುಕುಳಿದರು. ಕೆಲ ದಿನಗಳ ಹಿಂದೆ ಪೊಲೀಸ್ ಪೇದೆಯೊಬ್ಬರ ಪುತ್ರನೊಂದಿಗೆ ವಿಧಾನ್ ಸಿಂಗ್ ಜಗಳವಾಡಿದ್ದರು.

ಕಾನ್‌ಸ್ಟೆಬಲ್ ಶಿವಬಚನ್ ಯಾದವ್ ಅವರ ಪುತ್ರ ಶಿವಂ ಯಾದವ್ ಬಾಂಬ್ ಸ್ಫೋಟದ ಶಂಕಿತ ಆರೋಪಿ ಎಂದು ನಂಬಲಾಗಿದೆ. ಈ ದಾಳಿಯ ಹಿಂದೆ ಶಿವಂ ಯಾದವ್ ಕೈವಾಡವಿದೆ ಎಂದು ಬಿಜೆಪಿ ನಾಯಕಿ ವಿಜಯಲಕ್ಷ್ಮಿ ಆರೋಪಿಸಿದ್ದಾರೆ. ಜುಸಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಸಹಾಯಕ ಪೊಲೀಸ್ ಆಯುಕ್ತ ಚಿರಾಗ್ ಜೈನ್ ಪ್ರಕಾರ, ವಿಜಯಲಕ್ಷ್ಮಿ ದೂರಿನ ಮೇರೆಗೆ ಆರು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಈವರೆಗೆ ಮೂವರನ್ನು ಬಂಧಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!