ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ: ಗಾಯಾಳುಗಳ ಅರೋಗ್ಯ ವಿಚಾರಿಸಿದ ರಾಜ್ಯಪಾಲ ಗೆಹ್ಲೋಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ (Rameswaram Cafe blast) ಪ್ರಕರಣ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಇಂದು ಬೆಂಗಳೂರು ಪ್ರಕರಣದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಇದೇ ಸಂದರ್ಭ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ , ಈ ಘಟನೆ ಅತ್ಯಂತ ದುರ್ದೈವದ ಘಟನೆ ಮತ್ತು ಖಂಡನೀಯ . ತುಷ್ಟೀಕರಣದ ರಾಜಕೀಯದಿಂದ ಇಂಥ ಸಮಸ್ಯೆ ಆಗುತ್ತಿದೆ ಎಂದು ಅವರು ಆಕ್ಷೇಪಿಸಿದರು.

ಎನ್.ಐ.ಎ. ತನಿಖೆ ನಡೆಸಲು ರಾಜ್ಯ ಸರಕಾರ ಕೇಳಿದರೆ ಅದಕ್ಕೆ ಸಹಕಾರ ಕೊಡಲು ನಾವು ಸಿದ್ಧರಿದ್ದೇವೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!