ಭಾರತ್ ಜೋಡೋ ಯಾತ್ರೆಗೆ ಬಾಂಬ್: ರಾಹುಲ್ ಗೆ ಶಾಕ್ ನೀಡಿದ  ‘ಬೆದರಿಕೆ ಪತ್ರ’

ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ್ ಜೋಡೋ ಯಾತ್ರೆಯ ಸಂದರ್ಭ ಬಾಂಬ್ ಸ್ಪೋಟಿಸುವುದಾಗಿ ಬರೆದಿರುವ  ಪತ್ರ ಇಂದು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಭದ್ರತೆಯನ್ನು ಇನ್ನಷ್ಟು ಹೆಚ್ಚಿಸಲಾಗಿದೆ.
ರಾಹುಲ್, ಮಧ್ಯಪ್ರದೇಶಕ್ಕೆ ಆಗಮಿಸುವ ಮುನ್ನ  ಇಂದೋರ್‌ನಲ್ಲಿ ಈ ಬೆದರಿಕೆ ಪತ್ರ ಸಿಕ್ಕಿರುವುದು ಹಲವು ಚರ್ಚೆಗಳಿಗೆ ಎಡೆಮಾಡಿದೆ.
ಇಂದು ಶುಕ್ರವಾರ ಬೆಳಗ್ಗೆ ಇಂದೋರ್ ನ ಸಿಹಿತಿಂಡಿ ಮಾರಾಟದ ಅಂಗಡಿಯೊಂದರ ಹೊರಭಾಗದಲ್ಲಿ ಆಗಂತುಕರಿಬ್ಬರು ಈ ಪತ್ರವನ್ನು ಬಿಟ್ಟು ಹೋಗಿದ್ದಾರೆ ಎಂಬುದು ಖಚಿತಗೊಂಡಿದ್ದು, ಈ ಬಗ್ಗೆ ತನಿಖೆ ಕೈಗೆತ್ತಿಕೊಂಡಿರುವ ಪೊಲೀಸರು, ಸಿಸಿ ಕ್ಯಾಮರಾ ಸೆರೆ ಹಿಡಿದಿರುವ ದೃಶ್ಯಾವಳಿಗಳ ಆಧಾರದ ಮೇಲೆ ತನಿಖೆ ಕೈಗೆತ್ತಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!