ಆರ್‌ಎಸ್‌ಎಸ್‌ ಪಯ್ಯನ್ನೂರಿನ ಕಚೇರಿ ಮೇಲೆ ಬಾಂಬ್ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಕಚೇರಿ ಮೇಲೆ ಬಾಂಬ್ ದಾಳಿ. ಇಂದು ಮುಂಜಾನೆ ಈ ಘಟನೆ ನಡೆದಿದ್ದು, ದಾಳಿಯಲ್ಲಿ ಕಟ್ಟಡದ ಕಿಟಕಿ ಗಾಜುಗಳು ಒಡೆದಿರುವುದಾಗಿ ಪಯ್ಯನ್ನೂರು ಪೊಲೀಸರು ತಿಳಿಸಿದ್ದಾರೆ.

ಪಯ್ಯನ್ನೂರು ಪೊಲೀಸ್‌ ಠಾಣೆ ಆರ್‌ಎಸ್‌ಎಸ್‌ ಕಟ್ಟಡದಿಂದ 100ಮೀಟರ್‌ ಅಂತರದಲ್ಲೇ ಇದ್ದು, ಇಂತಹ ಘಟನೆ ನಡೆದಿರುವುದು ದುರಾದೃಷ್ಟಕರ. ಇಷ್ಟಕ್ಕೂ ಬಾಂಬ್‌ ದಾಳಿ ನಡೆಸಿದವರು ಯಾರು..? ಯಾವ ಕಾರಣಕ್ಕೆ ಈ ಕೃತ್ಯ ನಡೆಸಿದ್ದಾರೆಂದು ತಿಳಿದುಬಂದಿಲ್ಲ. ಸದ್ಯ ದುರ್ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!