Tuesday, March 28, 2023

Latest Posts

ಸಿಎಂ ಯೋಗಿ ಆದಿತ್ಯನಾಥ್ ನಿವಾಸದ ಬಳಿ ಬಾಂಬ್ ಬೆದರಿಕೆ ಕರೆ: ಪೊಲೀಸರು ಹೈ ಅಲರ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಲಖನೌ ನಿವಾಸದ ಬಳಿ ಬಾಂಬ್ ಇಟ್ಟ ಕರೆ ಬಂದಿದ್ದು, ತೀವ್ರ ಆತಂಕಕ್ಕೆ ಕಾರಣವಾಗಿದೆ.

ಇತ್ತ ಬಾಂಬ್ ನಿಷ್ಕ್ರೀಯದಳ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಇದುವರೆಗೆ ಯಾವುದೇ ಬಾಂಬ್ ಪತ್ತೆಯಾಗಿಲ್ಲ. ಇದು ಹುಸಿ ಬಾಂಬ್ ಕರೆಯಾಗಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಬೆದರಿಕೆ ಕರೆಯಿಂದಾಗಿ ಆತಂಕ ಹೆಚ್ಚಿದ್ದು, ಯೋಗಿ ಆದಿತ್ಯನಾಥ್ ನಿವಾಸದ ಸುತ್ತ ಮುತ್ತ ಭದ್ರತೆ ಹೆಚ್ಚಿಸಲಾಗಿದೆ. ಲಖನೌ ನಿವಾಸ ಸಮೀಪದ ರಸ್ತೆಗಳಲ್ಲಿ ಪೊಲೀಸರು ನಾಕಾಬಂಧಿ ಹಾಕಿದ್ದಾರೆ.

ಇದುವರೆಗೆ ಯಾವುದೇ ಬಾಂಬ್ ಪತ್ತೆಯಾಗಿಲ್ಲ. ಹೀಗಾಗಿ ಇದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ಪೊಲೀಸರು ಹೇಳಿದ್ದಾರೆ. ಇದೀಗ ಹುಸಿ ಬಾಂಬ್ ಕರೆ ಮಾಡಿದ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!