ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ರಾಮೇಶ್ವರಂ ಕೆಫೆಯ ಸ್ಫೋಟದ ನಂತರ, ಮಹದೇವಪುರದ ಪಾಸ್ತಾ ಸ್ಟ್ರೀಟ್ ರೆಸ್ಟೋರೆಂಟ್ನ ಮೇಲೂ ಬಾಂಬ್ ಸ್ಫೋಟಿಸಲಾಗುವುದು ಎಂಬ ಬೆದರಿಕೆ ಕರೆ ಬಂದಿದೆ. ಯಾರೋ ರೆಸ್ಟೋರೆಂಟ್ಗೆ ಕರೆ ಮಾಡಿ ಶೀಘ್ರದಲ್ಲೇ ರೆಸ್ಟೋರೆಂಟ್ನಲ್ಲಿ ಸ್ಫೋಟ ಸಂಭವಿಸಲಿದೆ ಎಂದು ಬೆದರಿಕೆ ಹಾಕಿದ್ದಾರೆ. ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದ ಪೊಲೀಸರಿಗೆ ಸತ್ಯ ತಿಳಿದು ಬೆಚ್ಚಿಬಿದ್ದಿದ್ದಾರೆ.
ತಡರಾತ್ರಿ ಮಹದೇವಪುರ ಪೊಲೀಸ್ ಠಾಣೆಯ ನೆಲಮಾಳಿಗೆಯಲ್ಲಿರುವ ಪಾಸ್ತಾ ಸ್ಟ್ರೀಟ್ ರೆಸ್ಟೋರೆಂಟ್ಗೆ ಕರೆ ಬಂದಿತ್ತು, ಶೀಘ್ರದಲ್ಲೇ ಬಾಂಬ್ ಸ್ಫೋಟ ನಡೆಯುವುದು ಎಂದು ಬೆದರಿಕೆ ಕರೆ ಬಂದಿತ್ತು. ರೆಸ್ಟೋರೆಂಟ್ ಸಿಬ್ಬಂದಿ ತಕ್ಷಣ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ, ಪೊಲೀಸರು ತಕ್ಷಣವೇ ಸ್ಥಳಕ್ಕೆ ತೆರಳಿ ರಾತ್ರಿಯಿಡೀ ತನಿಖೆ ನಡೆಸಿದ್ದಾರೆ.
ನಂತರ ಇಂದಿರಾನಗರ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ ಶ್ರೀ ವೇಲು ಎಂಬಾತನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಅಚ್ಚರಿ ಹೇಳಿಕೆ ನೀಡಿದ್ದಾನೆ. ಸಂಬಳ ಕೊಡದ ಹಿನ್ನೆಲೆ ತಾನು ರೆಸ್ಟೋರೆಂಟ್ಗೆ ಹುಸಿ ಬಾಂಬ್ ಬೆದರಿಕೆ ಹಾಕಿದ್ದಾಗಿ ವೇಲು ತಿಳಿಸಿದ್ದಾನೆ. ಇನ್ನು ಈ ಸಂಬಂಧ ಮಹದೇವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.