ಹೊಸದಿಗಂತ ಡಿಜಿಟಲ್ ಡೆಸ್ಕ್:
ಹುಸಿ ಬಾಂಬ್ ಬೆದರಿಕೆ ಪ್ರಕರಣ ಹೆಚ್ಚಳ ಹಿನ್ನೆಲೆ ಬುಧವಾರವಷ್ಟೇ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿತ್ತು. ಅದರ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಮನೆಗೇ ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದಿದೆ.
ಆ ಮೂಲಕ ಬಾಂಬ್ ಬೆದರಿಕೆ ಕಾಟ ಇದೀಗ ಮತ್ತೊಂದು ಮಜಲಿಗೆ ತಲುಪಿದೆ. ತಮಿಳುನಾಡಿನ ವ್ಯಕ್ತಿಯೋರ್ವನಿಂದ ಬೆದರಿಕೆ ಸಂದೇಶ ಕಳುಹಿಸಿರುವ ಅನುಮಾನಗಳು ವ್ಯಕ್ತವಾಗಿದ್ದು, ಆತನ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
SHOCKING | ಸಿಎಂ, ಡಿಸಿಎಂ ಮನೆಗೆ ಬಾಂಬ್ ಬೆದರಿಕೆ ಸಂದೇಶ

