ಹೊಸದಿಗಂತ ಡಿಜಿಟಲ್ ಡೆಸ್ಕ್:
186 ಪ್ರಯಾಣಿಕರಿದ್ದ ಆಕಾಶ ಏರ್ ದೆಹಲಿ-ಮುಂಬೈ ವಿಮಾನವನ್ನು ಬಾಂಬ್ ಬೆದರಿಕೆಯ ಕಾರಣ ಭದ್ರತೆಯ ಕಾರಣದಿಂದ ಅಹಮದಾಬಾದ್ ನಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು
ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಎಲ್ಲಾ ಪ್ರಯಾಣಿಕರನ್ನು ಸ್ಥಳಾಂತರಿಸಲಾಗಿದೆ ಮತ್ತು ಪ್ರಸ್ತುತ ವಿಮಾನವನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಲಾಗಿದೆ.
ಬಾಂಬ್ ಬೆದರಿಕೆಯ ನಂತರ ಮತ್ತು ಅಗತ್ಯವಿರುವ ಎಲ್ಲಾ ತುರ್ತು ಕಾರ್ಯವಿಧಾನಗಳನ್ನು ಪೂರ್ಣಗೊಳಿಸಿದ ನಂತರ ಕ್ಯಾಪ್ಟನ್ ಸುರಕ್ಷಿತವಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 10.13 ಕ್ಕೆ ಸುರಕ್ಷಿತವಾಗಿ ಇಳಿದರು. ಎಂದು ಆಕಾಶ ಏರ್ ವಕ್ತಾರರು ತಿಳಿಸಿದ್ದಾರೆ.