ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿದ್ದ ಭ್ರಷ್ಟಾಚಾರ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ಗೆ ನ್ಯಾಯಾಲಯವು 1 ಲಕ್ಷ ರೂಪಾಯಿಗಳ ಶ್ಯೂರಿಟಿ ಮೊತ್ತದ ಮೇಲೆ ಬಾಂಬೆ ಹೈಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ. ಜೊತೆಗೆ ತಮ್ಮ ಪಾಸ್ಪೋರ್ಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ.
ನ್ಯಾಯಾಲಯದ ತೀರ್ಪಿನ ಕುರಿತು, ದೇಶಮುಖ್ ಅವರ ವಕೀಲ ಅನಿಕೇತ್ ನಿಕಮ್ ಮಾತನಾಡಿ, ದೇಶ್ಮುಖ್ ಅವರ ಆರೋಗ್ಯವು ಹದಗೆಟ್ಟಿದೆ ಅದರ ಆಧಾರದ ಮೇಲೆ ಆರೋಗ್ಯ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಜಾಮೀನು ಪಡೆದಿದ್ದಾಗಿ ತಿಳಿಸಿದರು. ಈ ಆದೇಶದ ವಿರುದ್ಧ ನಾವು ಉನ್ನತ ನ್ಯಾಯಾಲಯಕ್ಕೆ ಹೋಗುವುದಾಗಿ ಸಿಬಿಐ ತಿಳಿಸಿದೆ.
ಸಿಬಿಐ ವಿಶೇಷ ನ್ಯಾಯಾಲಯವು ಅಕ್ಟೋಬರ್ 21 ರಂದು ದೇಶಮುಖ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ಪ್ರಕರಣಕ್ಕೆ ಸಂಬಂಧ ಅಕ್ಟೋಬರ್ 26 ರಂದು ಬಾಂಬೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು.