ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ನ ಬಹು ನಿರೀಕ್ಷಿತ ‘ಗಂಗೂಬಾಯಿ ಕಾಥಿಯಾವಾಡಿ’ ಚಿತ್ರದ ವಿರುದ್ಧ ಸಲ್ಲಿಸಿದ್ದ ಅರ್ಜಿಗಳನ್ನು ಬಾಂಬೆ ಹೈಕೋರ್ಟ್ ವಜಾ ಮಾಡಿದ್ದು, ಈ ಮೂಲಕ ಚಿತ್ರ ರಿಲೀಸ್ ಗೆ ಇದ್ದ ಅಡೆ ತಡೆ ತೆರವಾಗಿದೆ.
ಇದೇ 25ರಂದು ರಿಲೀಸ್ ಆಗಲಿರುವ ಈ ಸಿನಿಮಾದ ವಿರುದ್ಧ ರೆಡ್ಲೈಟ್ ಏರಿಯಾ ಎಂದೇ ಖ್ಯಾತವಾಗಿರುವ ಕಾಮಾಟಿಪುರ ಮತ್ತು ಕಾಥಿಯಾವಾಡಿಯ ಜನರು, ಗಂಗೂಬಾಯಿಯ ದತ್ತು ಮಗ ಹಾಗೂ ಕಾಂಗ್ರೆಸ್ ಶಾಸಕ ಕೋರ್ಟ್ ಮೊರೆ ಹೋಗಿದ್ದರು.
ಕಾಮಾಟಿಪುರ ಮತ್ತು ಕಾಥಿಯಾವಾಡಿಯದ ಬಗ್ಗೆ ಈ ಸಿನಿಮಾದಲ್ಲಿ ಹೆಸರು ಉಲ್ಲೇಖವಾಗಿದ್ದು, ಇದರಿಂದ ಈ ಪ್ರದೇಶಗಳಿಗೆ ಕೆಟ್ಟ ಹೆಸರು ಬರುತ್ತದೆ. ಈ ಹಿನ್ನೆಲೆಯಲ್ಲಿ, ಆ ಹೆಸರುಗಳನ್ನು ತೆಗೆದುಹಾಕುವಂತೆ ಕೋರ್ಟ್ನಲ್ಲಿ ಕೋರಲಾಗಿತ್ತು.
ಇದೀಗ ಇದ್ದ ಅಡೆ ತಡೆಗಳು ತೆರವು ಆಗಿದ್ದು, ಈ ಮೂಲಕ ಸಿನಿಮಾ ರಿಲೀಸ್ ಗೆ ಗ್ರೀನ್ ಸಿಗ್ನಲ್ ಸಿಕ್ಕಂತಾಗಿದೆ.