ರೈತಶಕ್ತಿ ಯೋಜನೆ ಘೋಷಣೆ, ಕೃಷ್ಣಾ- ಕಳಸಾ ಬಂಡೂರಿ ನೀರಾವರಿ ಯೋಜನೆಗೆ ಭಾರೀ ಅನುದಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಬಜೆಟ್‌ ನಲ್ಲಿ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ರೈತ ಶಕ್ತಿ ಯೋಜನೆಯನ್ನು ಘೋಷಿಸಿದ್ದಾರೆ. ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಸರ್ಕಾರವು ಆದ್ಯತೆ ನೀಡಿದೆ.
ಕೃಷ್ಣಾಮೇಲ್ದಂಡ 3ನೇ ಹಂತಕ್ಕೆ 5ಸಾವಿರ ಕೋಟಿ ರೂಪಾಯಿ, ಕಳಸಾ ಬಂಡೂರಿ ಯೋಜನೆಗೆ 1000 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಜೊತೆಗೆ ಕೃಷಿ ಉತ್ಪಾದಕತೆ ಹೆಚ್ಚಿಸಲು ಯಂತ್ರೋಪಕರಣ ಬಳಕೆಗೆ ಪ್ರತಿ ಎಕರೆಗೆ 250 ರುಪಾಯಿಯಂತೆ ಗರಿಷ್ಠ 5 ಎಕರೆಗೆ ಡೀಸೆಲ್ ಸಹಾಯ ಧನ ನೀಡುವುದಾಗಿ ಘೋಷಿಸಿದ್ದಾರೆ. ಯೋಜನೆಗಾಗಿ ಸರ್ಕಾರವು 500 ಕೋಟಿ ರು.ಗಳನ್ನು ಮೀಸಲಿಟ್ಟಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!