ಹೊಸದಿಗಂತ ಡಿಜಿಟಲ್ ಡೆಸ್ಕ್ :
ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿ ಎರಡನೇ ಬಾರಿ ಮಂಡಿಸಿದ ರಾಜ್ಯ ಬಜೆಟ್ ಇದೀಗ ಮುಕ್ತಾಯಗೊಂಡಿದೆ. ಬಿಜೆಪಿ ಸರ್ಕಾರದ ಈ ಅವಧಿಯ ಕೊನೆಯ ಬಜೆಟ್ ಮಂಡನೆ ಇದಾಗಿದ್ದು, ವಿವಿಧ ಅನುದಾನಗಳನ್ನು ಬೊಮ್ಮಾಯಿ ಘೋಷಿಸಿದರು.
ಮುಖ್ಯಮಂತ್ರಿ ಬೊಮ್ಮಾಯಿ ಅವರು ಸುಮಾರು 2.35 ಗಂಟೆಗಳ ಕಾಲ ಬಜೆಟ್ ಅನ್ನು ಓದಿದರು. ಬಜೆಟ್ ನ್ಲಲಿ ವಿವಿಧ ಕ್ಷೇತ್ರಗಳಿಗೆ ಅನುದಾನವನ್ನು ಘೋಷಿಸಿದರು.
15ನೇ ವಿಧಾನಸಭೆಯ ಕೊನೆಯ ಅಧಿವೇಶನ ಇದಾಗಿದೆ ಎಂದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕಲಾಪವನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಿದರು.