ಮತ್ತೊಮ್ಮೆ ಕುಮಾರಸ್ವಾಮಿ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಬೊಮ್ಮಾಯಿ ಭೇಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಗ್ಯ ವಿಚಾರಿಸಲು ಬಸವರಾಜ ಬೊಮ್ಮಾಯಿ ಮತ್ತೊಮ್ಮೆ ಜಯನಗರದ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದರು.

ಎಚ್‌ಡಿಕೆ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಮೊನ್ನೆಯೇ ನಾನು ಕುಮಾರಸ್ವಾಮಿಯವರ ಆರೋಗ್ಯ ವಿಚಾರಿಸಿದ್ದೇನೆ. ಇಂದು ಮತ್ತೆ ಅವರ ಆರೋಗ್ಯ ವಿಚಾರಿಸಲು ಬಂದಿದ್ದೆ. ಈಗವರು ಲವಲವಿಕೆಯಿಂದ ಇದ್ದಾರೆ. ಬೇಗ ಗುಣಮುಖರಾಗಲಿ ಎಂದು ಅಶಿಸುತ್ತೇನೆ ಎಂದರು.

ಕಾವೇರಿ ನೀರು ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾವೇರಿ ವಿಚಾರದಲ್ಲಿ ಸಿಡಬ್ಲೂಎಂಎ ಆದೇಶ ಮಾಡಿ ನೀರು ಬಿಡಿಸ್ತಾ ಇದ್ರು. ಯಾಕೆ ನಮ್ಮವರು ಈ ವಿಷಯವನ್ನು ಸಮಗ್ರವಾಗಿ ವಾದ ಮಾಡ್ತಿಲ್ಲ ಅಂತ ಗೊತ್ತಾಗ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!