ಹೊಸದಿಗಂತ ವರದಿ ಕಲಬುರಗಿ:
ಪಕ್ಷದ ಸಂಘಟನೆಗೆ ಬಲ ತುಂಬುವ ಉದ್ದೇಶದಿಂದ ರಾಜ್ಯದಾದ್ಯಂತ ಬೂತ್ ವಿಜಯ ಅಭಿಯಾನ ಆರಂಭವಾಗಿದೆ.
ಬುಧವಾರ ಕಲಬುರಗಿ ಉತ್ತರ ಮತ ಕ್ಷೇತ್ರದ ವಾರ್ಡ್ ನಂ. 05 ರಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಹಾಗೂ ಬೂತ್ ವಿಜಯ ಅಭಿಯಾನ ಕಾರ್ಯಕ್ರಮದ ವಿಭಾಗ ಸಂಚಾಲಕರಾದ ಶ್ರೀಮತಿ ಹೇಮಲತಾ ನಾಯಕ ಅವರು ಶಕ್ತಿ ಕೇಂದ್ರದ ಅಧ್ಯಕ್ಷರ ಮನೆಯ ಮೆಲೆ ಬಿಜೆಪಿ ಧ್ವಜ ಹಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.