ಹೊಸದಿಗಂತ ಡಿಜಿಟಲ್ ಡೆಸ್ಕ್
ಕರ್ನಾಟಕದೊಂದಿಗೆ ನಡೆಯುತ್ತಿರುವ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿದ್ದು, ಮಾಹಿತಿ ನೀಡಿದ್ದಾರೆ.
ಎರಡು ರಾಜ್ಯಗಳ ನಾಯಕರ ನಡುವಿನ ವಾಕ್ಸಮರ ಒಂದೆಡೆಯಾದರೆ, ಯತ್ತ ವಾಹನಗಳ ಮೇಲೆ ದಾಳಿ ಮತ್ತು ಕಾರ್ಯಕರ್ತರ ಪ್ರತಿಭಟನೆ ನಡೆಯುತ್ತಿದ್ದು, ಈ ಕುರಿತು ಫಡ್ನವೀಸ್ ಅವರು ಕೇಂದ್ರ ಗೃಹ ಸಚಿವರಿಗೆ ಮಾಹಿತಿ ನೀಡಿದ್ದಾರೆ.
ಘರ್ಷಣೆಗೆ ಕಾರಣವಾಗಿರುವ ದಶಕಗಳಷ್ಟು ಹಳೆಯದಾದ ಗಡಿ ವಿವಾದದ ಕುರಿತು ಮಹಾರಾಷ್ಟ್ರದ ನಿಲುವಿನ ಕುರಿತು ಶಾ ಮಾಹಿತಿ ಪಡೆದಿದ್ದಾರೆ ಎಂದು ಫಡ್ನವಿಸ್ ಅವರ ಕಚೇರಿ ಹೇಳಿದೆ.
ಇದೇ ವೇಳೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ದೂರವಾಣಿ ಕರೆ ಮೂಲಕ ಮಾತುಕತೆ ನಡೆಸಿದ್ದ ಕುರಿತು ತಿಳಿಸಿದ್ದಾರೆ.