ಹೊಸದಿಗಂತ ಡಿಜಿಟಲ್ ಡೆಸ್ಕ್ :
ಗಡಿ ವಿವಾದದ ಕುರಿತು ಕರ್ನಾಟಕ ಸರಕಾರ ವಿಧಾನಸಭೆಯಲ್ಲಿ ನಿರ್ಣಯವನ್ನು ಸರ್ವಾನುಮತದಿಂದಅಂಗೀಕರಿಸಿದ ಕೆಲವೇ ದಿನಗಳ ನಂತರ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಕರ್ನಾಟಕದ ‘ಮರಾಠಿ ವಿರೋಧಿ’ ನಿಲುವನ್ನು ಖಂಡಿಸಿದ್ದು, ರಾಜ್ಯ ವಿಧಾನಸಭೆಯಲ್ಲಿ ನಿರ್ಣಯವನ್ನು ಮಂಡಿಸಿದ್ದು, ಸರ್ವಾನುಮತದಿಂದ ಅಂಗೀಕಾರವಾಗಿದೆ.
ಸುಪ್ರೀಂಕೋರ್ಟ್ ಏನು ಕೇಳುತ್ತದೆಯೋ ಅದನ್ನು ಮಹಾರಾಷ್ಟ್ರ ಸರ್ಕಾರ ಮಾಡುತ್ತದೆ ಎಂದು ನಿರ್ಣಯದಲ್ಲಿ ಹೇಳಿದೆ. ಬೆಳಗಾವಿ, ಕಾರವಾರ, ಬೀದರ್, ನಿಪ್ಪಾಣಿ,ಭಾಲ್ಕಿಯ ಪ್ರತಿಯೊಂದು ಇಂಚನ್ನೂ ಮಹಾರಾಷ್ಟ್ರದ ಭಾಗವನ್ನಾಗಿ ಮಾಡಲಾಗುವುದು ಎಂದು ನಿರ್ಣಯದಲ್ಲಿ ಒತ್ತಿ ಹೇಳಲಾಗಿದೆ.
ಮಹಾರಾಷ್ಟ್ರ ಸೃಷ್ಟಿಸಿರುವ ಗಡಿ ವಿವಾದವನ್ನು ಕರ್ನಾಟಕ ಗುರುವಾರ ಖಂಡಿಸಿತ್ತು. ಕರ್ನಾಟಕದ ಭೂಮಿ, ನೀರು, ಭಾಷೆ ಮತ್ತು ಕನ್ನಡಿಗರ ಹಿತಾಸಕ್ತಿಗೆ ಸಂಬಂಧಿಸಿದಂತೆ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ.ಕರ್ನಾಟಕದ ಜನತೆ ಮತ್ತು ಸದಸ್ಯರ (ವಿಧಾನಸಭಾ) ಭಾವನೆಗಳು ಕೂಡಾ ಇದೇ ಆಗಿದೆ. ರಾಜ್ಯದ ಹಿತಾಸಕ್ತಿ ಕಾಪಾಡಲು ನಾವೆಲ್ಲರೂ ಒಗ್ಗಟ್ಟಿನಿಂದ ಸಾಂವಿಧಾನಿಕ ಮತ್ತು ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ಬದ್ಧರಾಗಿದ್ದೇವೆ ಎಂದು ಕರ್ನಾಟಕ ಹೇಳಿದೆ.