Sunday, December 10, 2023

Latest Posts

ಗಡಿ ವಿವಾದ: ಡಿ.3ರಂದು ಬೆಳಗಾವಿಗೆ ಭೇಟಿ ನೀಡಲಿದ್ದಾರೆ ಇಬ್ಬರು ಮಹಾರಾಷ್ಟ್ರ ಸಚಿವರು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದ ಸಚಿವರಾದ ಚಂದ್ರಕಾಂತ್ ಪಾಟೀಲ್ ಮತ್ತು ಶಂಭುರಾಜ್ ದೇಸಾಯಿ ಅವರು ಡಿ.3 ರಂದು ಬೆಳಗಾವಿಗೆ ಆಗಮಿಸಲಿದ್ದಾರೆ.

ಪಾಟೀಲ್ ಮತ್ತು ದೇಸಾಯಿ ಅವರನ್ನು ಗಡಿಭಾಗದ ಸಮನ್ವಯ ಸಚಿವರನ್ನಾಗಿ ನೇಮಿಸಲಾಗಿದ್ದು, ಉಭಯ ರಾಜ್ಯಗಳ ನಡುವಿನ ಗಡಿ ವಿವಾದದ ಕುರಿತು ನ್ಯಾಯಾಲಯದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ತಂಡದೊಂದಿಗೆ ಸಮನ್ವಯ ಸಾಧಿಸುವ ಉದ್ದೇಶದೊಂದಿಗೆ ಸಚಿವರ ಆಗಮಿಸುತ್ತಿದ್ದಾರೆ.

ಈ ವೇಳೆ ಅವರು ಮಧ್ಯವರ್ತಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ಕಾರ್ಯಕರ್ತರನ್ನು ಭೇಟಿ ಮಾಡಿ, ಕರ್ನಾಟಕದೊಂದಿಗಿನ ದಶಕಗಳ ಗಡಿ ವಿವಾದದ ಬಗ್ಗೆ ಮಾತುಕತೆ ನಡೆಸಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!