ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಸಚಿವರಾದ ಚಂದ್ರಕಾಂತ್ ಪಾಟೀಲ್ ಮತ್ತು ಶಂಭುರಾಜ್ ದೇಸಾಯಿ ಅವರು ಡಿ.3 ರಂದು ಬೆಳಗಾವಿಗೆ ಆಗಮಿಸಲಿದ್ದಾರೆ.
ಪಾಟೀಲ್ ಮತ್ತು ದೇಸಾಯಿ ಅವರನ್ನು ಗಡಿಭಾಗದ ಸಮನ್ವಯ ಸಚಿವರನ್ನಾಗಿ ನೇಮಿಸಲಾಗಿದ್ದು, ಉಭಯ ರಾಜ್ಯಗಳ ನಡುವಿನ ಗಡಿ ವಿವಾದದ ಕುರಿತು ನ್ಯಾಯಾಲಯದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ತಂಡದೊಂದಿಗೆ ಸಮನ್ವಯ ಸಾಧಿಸುವ ಉದ್ದೇಶದೊಂದಿಗೆ ಸಚಿವರ ಆಗಮಿಸುತ್ತಿದ್ದಾರೆ.
ಈ ವೇಳೆ ಅವರು ಮಧ್ಯವರ್ತಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ಕಾರ್ಯಕರ್ತರನ್ನು ಭೇಟಿ ಮಾಡಿ, ಕರ್ನಾಟಕದೊಂದಿಗಿನ ದಶಕಗಳ ಗಡಿ ವಿವಾದದ ಬಗ್ಗೆ ಮಾತುಕತೆ ನಡೆಸಲಿದ್ದಾರೆ.
महाराष्ट्र-कर्नाटक सीमाप्रश्नी बेळगावी येऊन कार्यकर्त्यांशी चर्चा करावी, अशी मध्यवर्ती महाराष्ट्र एकीकरण समितीची भूमिका आहे. त्यानुसार मी आणि समन्वयक मंत्री शंभुराज देसाई ३ डिसेंबर रोजी दिवसभर बेळगाव येथे जाऊन कार्यकर्त्यांशी चर्चा करणार आहोत.
भेटूया, चर्चेतून नक्कीच मार्ग निघतो! pic.twitter.com/nQiq3mgzcE— Chandrakant Patil (@ChDadaPatil) November 28, 2022