ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೇಂಟ್ಗೆ ಬಳಸುವ ಥಿನ್ನರ್ ಕುಡಿದು ಬಾಲಕ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಹಿರೆಕೊಟ್ನೇಕಲ್ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕನನ್ನು ಶಿವಾರ್ಜುನ ನಾಯಕ್(3) ಎಂದು ಗುರುತಿಸಲಾಗಿದೆ
ಬಾಲಕನ ಮನೆಯಲ್ಲಿ ಪೇಂಟ್ಗೆ ಕೆಲಸ ನಡೆಯುತ್ತಿತ್ತು. ಗ್ರಾಮದಲ್ಲಿ ಜಾತ್ರಾ ಮಹೋತ್ಸವ ಹಿನ್ನೆಲೆ ಪೇಂಟ್ಗೆ ಕೆಲಸಕ್ಕಾಗಿ ಥಿನ್ನರ್ ತಂದಿದ್ದರು. ಈ ವೇಳೆ ಅಕಸ್ಮಾತ್ ಆಗಿ ಮನೆಯಲ್ಲಿಟ್ಟಿದ್ದ ಥಿನ್ನರ್ನ್ನು ಬಾಲಕ ಕುಡಿದಿದ್ದಾನೆ. ಅಸ್ವಸ್ಥಗೊಂಡಿದ್ದ ಆತನನ್ನು ಕೂಡಲೇ ಮಾನ್ವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಸಾವನ್ನಪ್ಪಿದ್ದಾನೆ.