ದಿಗಂತ ವರದಿ ವಿಜಯಪುರ:
ನೀರಿನ ಸಂಪ್ಗೆ ಬಿದ್ದು ಬಾಲಕ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಹುಡ್ಕೋ ಬಡಾವಣೆಯಲ್ಲಿ ನಡೆದಿದೆ. ಇಲ್ಲಿನ ಶ್ರೇಯಸ್ (5) ಮೃತಪಟ್ಟಿರುವ ಬಾಲಕ.
ಮುದ್ದೇಬಿಹಾಳ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬಾಲಕನ ಮೃತದೇಹ ಹೊರ ತೆಗೆದಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.