ದೊಡ್ಡ ಎಡವಟ್ಟು ಮಾಡ್ಕೊಂಡ ಬಾಯ್ಸ್‌, 65ಗ್ರಾಂನ ಚಿನ್ನದ ಸರದ ಜೊತೆ ಗಣೇಶ ವಿಸರ್ಜನೆ!

ಹೊಸದಿಗಂತ ಡಿಜಿಟ್‌ ಡೆಸ್ಕ್‌:

ಗಣೇಶ ವಿಸರ್ಜನೆ ಜೋಶ್‌ನಲ್ಲಿ ಬೆಂಗಳೂರು ಬಾಯ್ಸ್‌ ದೊಡ್ಡ ಎಡವಟ್ಟು ಮಾಡಿಕೊಂಡಿದ್ದಾರೆ. ಗಣೇಶನ ಮೂರ್ತಿಗೆ ಸುಮಾರು 65ಗ್ರಾಂನಷ್ಟು ತೂಕದ ಚಿನ್ನದ ಸರ ಹಾಕಿ ಪೂಜೆ ಮಾಡಿದ್ದ ಹುಡುಗರು ವಿಸರ್ಜನೆ ಸಮಯದಲ್ಲಿ ಅದನ್ನು ತೆಗೆಯುವುದನ್ನೇ ಮರೆತಿದ್ದರು.

ಬೆಂಗಳೂರಿನ ಮಾಗಡಿರೋಡ್‌ನ ದಾಸರಹಳ್ಳಿಯ ಬಿ.ಆರ್.ಐ ಕಾಲೋನಿಯಲ್ಲಿ ಘಟನೆ ನಡೆದಿದೆ.ಏರಿಯಾದಲ್ಲಿ ಮನೆಯಲ್ಲಿಟ್ಟ ಗಣೇಶ ವಿಸರ್ಜನೆಗಾಗಿ ಬಿಬಿಎಂಪಿಯಿಂದ ಟ್ರಕ್ ನೀರಿನ ವ್ಯವಸ್ಥೆ ಮಾಡಲಾಗಿತ್ತು.
ನಿನ್ನೆ ಶನಿವಾರ ಸಂಜೆ 7 ಗಂಟೆ ಸುಮಾರಿಗೆ ಹೋಗಿ ಚಿನ್ನದ ಸರದ ಸಮೇತ ಗಣೇಶ ಮೂರ್ತಿ ವಿಸರ್ಜನೆ ಮಾಡಿದ್ದಾರೆ. ರಾತ್ರಿ ಹತ್ತು ಗಂಟೆಯ ಸುಮಾರಿಗೆ ಚಿನ್ನದ ಸರದ ನೆನಪಾಗಿದೆ. ಯುವಕರು ತಕ್ಷಣ ಟ್ರಕ್‌ನ ಚಾಲಕ ಹಾಗೂ ಬಿಬಿಎಂಪಿ ಸಿಬ್ಬಂದಿಗೆ ವಿಚಾರ ತಿಳಿಸಿದ್ದಾರೆ.

ಈ ವೇಳೆ ಟ್ರಕ್‌ನಲ್ಲಿದ್ದ ನೀರನ್ನು ಖಾಲಿ ಮಾಡಿ, ಗಣೇಶ ಮೂರ್ತಿ ಕರಗಿದ್ದ ಮಣ್ಣಲ್ಲಿ ಚಿನ್ನದ ಸರಕ್ಕೆ ಹುಡುಕಾಟ ನಡೆಸಿದ್ದಾರೆ. ರಾತ್ರಿಯೆಲ್ಲ ಹುಡುಕಾಡಿದ ಬಳಿಕ‌ ಬೆಳಗಿನ ಜಾವ 65 ಗ್ರಾಂ ಚಿನ್ನದ ಸರ ಸಿಕ್ಕಿದೆ. ಚಿನ್ನದ ಸರ ಕಂಡು ಯುವಕರು ನಿಟ್ಟುಸಿರು ಬಿಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!