ಹೊಸದಿಗಂತ ವರದಿ ಗದಗ:
ಮಾಜಿ ಶಾಸಕ ಬಿ.ಆರ್.ಯಾವಗಲ್ ಮಾಡಿರುವ ಆರೋಪ ಹಸಿ ಸುಳ್ಳಿನಿಂದ ಕೂಡಿದೆ ಎಂದು ಮಾಜಿ ಸಚಿವ ಹಾಲಿ ಶಾಸಕ ಸಿ.ಸಿ.ಪಾಟೀಲ್ ಟೀಕೆ ಮಾಡಿದರು.
ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಚುನಾವಣೆ ಪೂರ್ವದಲ್ಲಿ ನಾನು ಮಾಡಿದ ಅಭಿವೃದ್ಧಿ ಕೆಲಸಗಳ ಬಗ್ಗೆ ನರಗುಂದ ಕ್ಷೇತ್ರದಲ್ಲಿ 220 ಬೂತ್ಗಳಲ್ಲಿ ನೀತಿ ಸಂಹಿತೆ ಜಾರಿ ಆಗುವವರೆಗೂ ಫ್ಲೆಕ್ಸ್ಗಳನ್ನು ಅಳವಡಿಸಲಾಗಿತ್ತು. ಅಂದು ಯಾವುದೆ ಅಪಾದನೆ, ಆರೋಪ ಮಾಡದೆ ಇಂದು ಗುತ್ತಿಗೆದಾರರ ಬಿಲ್ಗಳನ್ನು ತಡೆ ಹಿಡಿಸುವ ಮೂಲಕ ತಮ್ಮ ಹತಾಶ ಭಾವನೆಯನ್ನು ವ್ಯಕ್ತಪಡಿಸಿದ್ದಾರೆ.
ನನ್ನ ಸಾಧನೆಗಳನ್ನು ಜೀರ್ಣಿಸಿಕೊಳ್ಳಲು ಅವರಿಗೆ ಆಗುತ್ತಿಲ್ಲ ಎಂದು ಶಾಸಕ ಸಿ.ಸಿ.ಪಾಟೀಲ್ ಆಕ್ರೋಶ ಹೊರಹಾಕಿದರು.