Tuesday, October 28, 2025

ಅಂತಾರಾಜ್ಯ ಮೆಟ್ರೋ ಸಂಪರ್ಕಕ್ಕೆ ಬ್ರೇಕ್: ಹೊಸೂರು ಮೆಟ್ರೋ ಯೋಜನೆಯಿಂದ ಹಿಂದೆ ಸರಿದ BMRCL!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಿಂದ ತಮಿಳುನಾಡಿನ ಹೊಸೂರನ್ನು ಸಂಪರ್ಕಿಸಲು ಮೆಟ್ರೋ ಮಾರ್ಗ ನಿರ್ಮಾಣಕ್ಕೆ ಮುಂದಾಗಿದ್ದ ಬಿಎಂಆರ್​ಸಿಎಲ್ (BMRCL) ಇದೀಗ ಈ ನಿರ್ಧಾರ ಕೈಬಿಟ್ಟಿದೆ.

ಆರಂಭದಲ್ಲಿ ಕನ್ನಡಪರ ಸಂಘಟನೆಗಳು ಸೇರಿದಂತೆ ಅನೇಕರು ಈ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಸದ್ಯ ತಾಂತ್ರಿಕ ಸಮಸ್ಯೆ ಕಾರಣ ಬಿಎಂಆರ್​ಸಿಎಲ್ ಯೋಜನೆ ರದ್ದುಗೊಳಿಸುವ ನಿರ್ಧಾರಕ್ಕೆ ಬಂದಿದ್ದು, ರಾಜ್ಯ ಸರ್ಕಾರಕ್ಕೂ ಈ ಬಗ್ಗೆ ವರದಿ ನೀಡಿದೆ.

ಬೆಂಗಳೂರು ಮೆಟ್ರೋವನ್ನು 470 ಕಿ.ಮೀ.ಗೆ ವಿಸ್ತರಿಸಲು ಯೋಜನೆ ಹಾಕಿಕೊಳ್ಳುವಂತೆ ಕೇಂದ್ರ ಸರ್ಕಾರ ಬಿಎಂಆರ್​ಸಿಎಲ್​ಗೆ ಮನವಿ ಮಾಡಿತ್ತು. ಹಾಗಾಗಿ ಬಿಎಂಆರ್​ಸಿಎಲ್ ಈ ಯೋಜನೆ ಬಗ್ಗೆ ಅಧ್ಯಯವನ್ನು ನಡೆಸಿತ್ತು. 23 ಕಿ.ಮೀ. ಹೊಸೂರು-ಬೊಮ್ಮಸಂದ್ರ ಕಾರಿಡಾರ್​​ಗೆ ವಿದ್ಯುತ್​​ ಶಕ್ತಿಯನ್ನು ಬಳಸಿಕೊಳ್ಳಬಹುದು. ಆದರೆ ನಮ್ಮ ಮೆಟ್ರೋಗೆ ಸಂಯೋಜಿಸಲು ಸಾಧ್ಯವಿಲ್ಲ ಎಂದು ಬಿಎಂಆರ್‌ಸಿಎಲ್ ಸರ್ಕಾರಕ್ಕೆ ತಿಳಿಸಿದೆ.

ಬೆಂಗಳೂರು – ಹೊಸೂರು ಮಾರ್ಗವು ಆರ್.ವಿ ರೋಡ್ ಬೊಮ್ಮಸಂದ್ರ ಯೆಲ್ಲೋ ಮಾರ್ಗದ ವಿಸ್ತರಿತ ಮಾರ್ಗವಾಗಿದೆ. ಚೆನ್ನೈ ಮೆಟ್ರೋಗೂ, ನಮ್ಮ ಮೆಟ್ರೋ ಮಾರ್ಗಕ್ಕೂ ಸಾಕಷ್ಟು ವ್ಯತ್ಯಾಸ ಇರುವ ಕಾರಣ ತಮಿಳುನಾಡಿನ ಹೊಸೂರು ಮಾರ್ಗಕ್ಕೆ ತಾಂತ್ರಿಕವಾಗಿ ಹೊಂದಾಣಿಕೆ ಸಾದ್ಯವಿಲ್ಲ. ಹೀಗಾಗಿ ಇದನ್ನು ಜಾರಿ ಮಾಡುವುದು ಕಷ್ಟ ಸಾಧ್ಯ ಎಂಬುದಾಗಿ ಬಿಎಂಆರ್‌ಸಿಎಲ್ ರಾಜ್ಯ ಸರ್ಕಾರಕ್ಕೆ ವರದಿ ಕೊಟ್ಟಿದೆ‌‌.

ತಾಂತ್ರಿಕ ಸಮಸ್ಯೆಯ ಹೊಸೂರು ಮೆಟ್ರೋ ಮಾರ್ಗ ಯೋಜನೆಯನ್ನು ಬಿಎಂಆರ್‌ಸಿಎಲ್ ಕೈ ಬಿಟ್ಟಿದೆ. ಚೆನ್ನೈ ಮೆಟ್ರೋ ನಿಗಮ ಮತ್ತೆ ಈ ಸಂಬಂಧ ಸರ್ಕಾರಕ್ಕೆ ಮನವಿ ಸಲ್ಲಿಸುತ್ತದೆಯಾ ಎಂಬುದನ್ನು ಕಾದು ನೋಡಬೇಕಿದೆ.

error: Content is protected !!