‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಗೆ ವಿರಾಮ: ರಾಹುಲ್ ಗಾಂಧಿ ದೆಹಲಿಗೆ ವಾಪಾಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: 

‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಪಶ್ಚಿಮ ಬಂಗಾಳ ಪ್ರವೇಶಿಸಿದ್ದು, ಇದೀಗ ಎರಡು ದಿನಗಳ ವಿರಾಮ ತೆಗೆದುಕೊಂಡಿದ್ದರಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ದೆಹಲಿಗೆ ತೆರಳಿದ್ದಾರೆ.

ಜನವರಿ 14 ರಂದು ಮಣಿಪುರದಿಂದ ಪ್ರಾರಂಭವಾದ ರಾಹುಲ್ ಗಾಂಧಿ ನೇತೃತ್ವದ ಈ ಯಾತ್ರೆಯು ಇಂದು ಬೆಳಗ್ಗೆ ಅಸ್ಸಾಂನಿಂದ ಪಶ್ಚಿಮ ಬಂಗಾಳದ ಕೂಚ್‌ಬೆಹಾರ್ ಜಿಲ್ಲೆಯನ್ನು ಪ್ರವೇಶಿಸಿತು. ಕೂಚ್‌ಬೆಹಾರ್‌ನಲ್ಲಿ ರೋಡ್‌ಶೋ ನಡೆಸಿದ ನಂತರ ಯಾತ್ರೆಗೆ ಎರಡು ದಿನಗಳ ವಿರಾಮ ನೀಡಿದ್ದಾರೆ. ಅಲಿಪುರ್ದೌರ್‌ನ ಫಲಕಟಾದಲ್ಲಿ ಯಾತ್ರೆ ಸ್ಥಗಿತಗೊಂಡಿದೆ.

ಜನವರಿ 28 ರಂದು ಯಾತ್ರೆ ಪುನರಾರಂಭಗೊಳ್ಳಲಿದೆ. ರಾಹುಲ್ ಗಾಂಧಿ ವಾಪಸು ಬಂದು ಯಾತ್ರೆ ಮುನ್ನೆಡೆಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!