ಹೊಸದಿಗಂತ ಡಿಜಿಟಲ್ ಡೆಸ್ಕ್:
ಕ್ಷಿಪ್ರ ರಾಜಕೀಯ ಬೆಳವಣಿಗೆಗಳ ನಡುವೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ದೆಹಲಿಯಲ್ಲಿರುವ ಅಮಿತ್ ಶಾ ನಿವಾಸದಲ್ಲಿ ಉಭಯ ನಾಯಕರು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಲಿದ್ದಾರೆ.
ಜಗದೀಶ್ ಶೆಟ್ಟರ್ ಅವರನ್ನು ವಾಪಸ್ ಕರೆಸಿಕೊಳ್ಳಲು ಬಿಜೆಪಿ ಸರ್ವ ಪ್ರಯತ್ನ ನಡೆಸುತ್ತಿದೆ. ಹೈಕಮಾಂಡ್ ಕೂಡ ಉತ್ಸಾಹ ತೋರಿದೆ. ಜಗದೀಶ್ ಶೆಟ್ಟರ್ ಶೀಘ್ರದಲ್ಲೇ ದೆಹಲಿಗೆ ತೆರಳಿ ಅಮಿತ್ ಶಾ ಜೊತೆ ಮಾತುಕತೆ ನಡೆಸಲಿದ್ದಾರೆ. ಲೋಕಸಭೆ ಚುನಾವಣೆಗೆ ಬಿಜೆಪಿ, ಅವರಿಗೆ ಟಿಕೆಟ್ ನೀಡಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.