BREAKING | ಕೋಟೆ ಹಳ್ಳ ಸೇತುವೆ ಮುಳುಗಡೆ: ಉಪ್ಪಿನಂಗಡಿ-ಸುಬ್ರಹ್ಮಣ್ಯ ಸಂಚಾರ ಬಂದ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನಿರಂತರ ಸುರಿಯುತ್ತಿರುವ ಬಾರೀ ಮಳೆಗೆ ಸುಬ್ರಹ್ಮಣ್ಯ-ಕಡಬ ರಾಜ್ಯ ಹೆದ್ದಾರಿಯ ಕೈಕಂಬ ಬಳಿಯ ಕೋಟೆ ಹಳ್ಳ ಸೇತುವೆ ಶನಿವಾರ ರಾತ್ರಿ ಮುಳುಗಡೆಯಾಗಿದೆ.
ಇದರಿಂದ ನೀರಿನಿಂದ ಮುಳುಗಿ ಸಂಚಾರ ಸ್ಥಗಿತಗೊಂಡಿದೆ.
ರಸ್ತೆಯ ಎರಡು ಬದಿಯ ಇಕ್ಕೇಲಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಲ್ಲಬೇಕಾಯಿತು. ಇದರಿಂದ ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ರೈಲಿನಲ್ಲಿ ತೆರಳುವ ಯಾತ್ರಾರ್ತಿಗಳಿಗೆ ತೊಂದರೆ ಉಂಟಾಗಿದೆ.
ಉಪ್ಪಿನಂಗಡಿ-ಸುಬ್ರಹ್ಮಣ್ಯ ಸಂಚಾರ ಸಂಪೂರ್ಣ ರಸ್ತೆ ಬಂದ್ ಆಗಿದ್ದು, ಸೇತುವೆ ಎರಡೂ ಕಡೆಗಳಲ್ಲಿ ವಾಹನಗಳು ನಿಂತಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!