BREAKING NEWS | ಏರ್‌ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕನ ಮೊಬೈಲ್‌ ಸ್ಫೋಟ: ತುರ್ತು ಭೂಸ್ಪರ್ಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಸ್ಥಾನದ ಉದಯಪುರದಲ್ಲಿ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕನ ಮೊಬೈಲ್ ಫೋನ್ ಬ್ಯಾಟರಿ ಸ್ಫೋಟಗೊಂಡಿದೆ. ಇದರಿಂದಾಗಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.

ತಾಂತ್ರಿಕ ತಪಾಸಣೆಯ ನಂತರ ವಿಮಾನವನ್ನು ದೆಹಲಿಗೆ ಕಳುಹಿಸಲಾಗಿದೆ.

ವಿಮಾನಹಾರಾಟದ ವೇಳೆಯೇ ಮೊಬೈಲ್ ಫೋನ್ ಬ್ಯಾಟರಿ ಸ್ಫೋಟಗೊಂಡಿದ್ದು, ಈ ಕ್ಷಣ ಉದಯಪುರದ ದಬೋಕ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದ್ದು, ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಲಾಯಿತು.

ಈ ವಿಮಾನದಲ್ಲಿ ಒಟ್ಟು 140 ಪ್ರಯಾಣಿಕರಿದ್ದರು. ಫೋನ್‌ನ ಬ್ಯಾಟರಿ ಸ್ಫೋಟಗೊಂಡಿದ್ದರಿಂದ ವಿಮಾನದೊಳಗೆ ಕುಳಿತಿದ್ದವರೆಲ್ಲರೂ ಭಯಭೀತರಾಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!