ಹೊಸದಿಗಂತ ಡಿಜಿಟಲ್ ಡೆಸ್ಕ್ :
ಹರಿಯಾಣದಲ್ಲಿ ಕೇಂದ್ರ ಸರ್ಕಾರದ ಅಗ್ನಿಪಥ್ ನೇಮಕಾತಿ ಯೋಜನೆಯ ವಿರುದ್ಧದ ಪ್ರತಿಭಟನೆಗಳು ಹಿಂಸಾತ್ಮಕ ರೂಪಕ್ಕೆ ತಿರುಗಿದ್ದು, ಈ ಹಿನ್ನೆಲೆಯಲ್ಲಿ ಹರಿಯಾಣ ಸರ್ಕಾರ, ಶುಕ್ರವಾರ ಮೊಬೈಲ್ ಇಂಟರ್ನೆಟ್ ಮತ್ತು ಎಸ್ಎಂಎಸ್ ಸೇವೆಗಳನ್ನು ಸ್ಥಗಿತಗೊಳಿಸಲು ಆದೇಶಿಸಿದೆ.
ಆದೇಶದ ಪ್ರಕಾರ, ಸಂಭಾವ್ಯ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ತಕ್ಷಣದಿಂದಲೇ ಜಾರಿಗೆ ಬರುವಂತೆ ಮುಂದಿನ 24 ಗಂಟೆಗಳ ಕಾಲ ನಿರ್ಬಂಧಗಳನ್ನು ಜಾರಿಗೊಳಿಸಲು ಆದೇಶಿಸಿದೆ.
ನಿನ್ನೆಯಷ್ಟೇ, ಹರಿಯಾಣ ಸರ್ಕಾರವು ಮೊಬೈಲ್ ಇಂಟರ್ನೆಟ್ ಸೇವೆಗಳು ಮತ್ತು ಎಲ್ಲಾ ಎಸ್ಎಂಎಸ್ ಸೇವೆಗಳನ್ನು (ಬಲ್ಕ್ ಎಸ್ಎಂಎಸ್ ಮತ್ತು ಬ್ಯಾಂಕಿಂಗ್ ಮತ್ತು ಮೊಬೈಲ್ ರೀಚಾರ್ಜ್ ಹೊರತುಪಡಿಸಿ) ಮತ್ತು ಹರಿಯಾಣದ ಪಲ್ವಾಲ್ ಜಿಲ್ಲೆಯಲ್ಲಿ ಧ್ವನಿ ಕರೆಗಳನ್ನು ಹೊರತುಪಡಿಸಿ ಮೊಬೈಲ್ ನೆಟ್ ವರ್ಕ್ ಗಳಲ್ಲಿ ಒದಗಿಸಲಾದ ಎಲ್ಲಾ ಡಾಂಗಲ್ ಸೇವೆಗಳು ಇತ್ಯಾದಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು.
Haryana govt orders suspension of mobile internet services, all SMS services in view of potential law and order situation in the wake of new army recruitment policy. Order shall be in force for next 24 hours with immediate effect i.e. till 16:30 hours (tomorrow) pic.twitter.com/eoMsa9HQgx
— ANI (@ANI) June 17, 2022