ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಲಂಚ ಪಡೆದ ಪ್ರಸೂತಿ ತಜ್ಞ ಡಾ.ರಾಮಚಂದ್ರ ಅವರನ್ನು ಅಮಾನತುಗೊಳಿಸಿ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಆದೇಶ ಹೊರಡಿಸಿದ್ದಾರೆ.
ಯಲಹಂಕ ಆಸ್ಪತ್ರೆಯಲ್ಲಿ ಸಿಸೇರಿಯನ್ ಹೆರಿಗೆ ಮಾಡಿಸಲು ಮಂಜುಳಾ ಎಂಬ ಮಹಿಳೆಗೆ ಸಿಸೇರಿಯನ್ 10 ಸಾವಿರ ರೂ. ಲಂಚಕ್ಕೆ ಬೇಡಿಕೆ ಆರೋಪ ಮಾಡಲಾಗಿದೆ.
ಲೋಕಾಯುಕ್ತರ ತನಿಖೆಯಲ್ಲಿ 10 ಸಾವಿರ ಹಣ ಪಡೆದಿರುವುದು ಸಾಬೀತಾಗಿದೆ. ಹಾಗಾಗಿ ಲೋಕಾಯುಕ್ತರ ತನಿಖೆ ಆಧರಿಸಿ ವೈದ್ಯ ಡಾ.ರಾಮಚಂದ್ರ ಅವರನ್ನು ಅಮಾನತು ಮಾಡಲಾಗಿದೆ.