ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾಗತಿಕ ಮಾರುಕಟ್ಟೆ ಪ್ರವೇಶವನ್ನು ವಿಸ್ತರಿಸಲು ಸರ್ಕಾರವು ‘ಬ್ರಿಡ್ಜ್ ಟು ಬೆಂಗಳೂರು– ಡೈಲಾಗ್ ವಿತ್ ಡಿಪ್ಲೊಮ್ಯಾಟ್ಸ್’ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಇದೇ ತಿಂಗಳ 17ರಂದು ದೆಹಲಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿದೇಶಗಳಿಂದ ಪ್ರತಿನಿಧಿಗಳು ಕೂಡ ಭಾಗವಹಿಸಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಕಿರಣ್ ಮಜುಂದಾರ್-ಶಾ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಈ ವೇದಿಕೆ GIA 2.0ಗೆ ಜಾಗತಿಕ ಪ್ರದರ್ಶನ ವೇದಿಕೆಯಾಗಿದ್ದು, ಸರ್ಕಾರಗಳು, ರಾಜತಾಂತ್ರಿಕರು, ಸ್ಟಾರ್ಟ್ಅಪ್ಗಳು, ಉದ್ಯಮ ನಾಯಕರೂ ಹಾಗೂ ಸಂಶೋಧನಾ ಸಂಸ್ಥೆಗಳನ್ನು ಒಟ್ಟುಗೂಡಿಸಿ ಉದಯೋನ್ಮುಖ ಕ್ಷೇತ್ರಗಳಲ್ಲಿ ಸಹಕಾರವನ್ನು ಗಾಢಗೊಳಿಸುವುದಕ್ಕೆ ಸಹಾಯಕವಾಗಲಿದೆ ಎಂದು ಐಟಿ ಬಿಟಿ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ



