Sunday, October 1, 2023

Latest Posts

ಧರ್ಚುಲಾದಲ್ಲಿ ಮಹಾಕಾಳಿ ನದಿಗೆ ಸೇತುವೆ: ಭಾರತ-ನೇಪಾಳ ನಡುವಿನ ಒಪ್ಪಂದಕ್ಕೆ ಸಂಪುಟ ಒಪ್ಪಿಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್

ಹೊಸದಿಲ್ಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಭಾರತ ಮತ್ತು ನೇಪಾಳ ಗಡಿ ಧರ್ಚುಲಾದಲ್ಲಿ ಮಹಾಕಾಳಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಲು ಉಭಯ ರಾಷ್ಟ್ರಗಳ ನಡುವಿನ ತಿಳಿವಳಿಕೆ ಒಪ್ಪಂದಕ್ಕೆ ತನ್ನ ಅನುಮೋದನೆ ನೀಡಿದೆ.

ಈ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕುವುದರೊಂದಿಗೆ, ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧ ಮತ್ತಷ್ಟು ಸುಧಾರಿಸುತ್ತದೆ.

ನಿಕಟ ನೆರೆ ಹೊರೆಯವರಾಗಿ, ಭಾರತ ಮತ್ತು ನೇಪಾಳ ರಾಷ್ಟ್ರಗಳು ಮುಕ್ತ ಗಡಿ ಮತ್ತು ಆಳವಾಗಿ ಬೇರೂರಿರುವ ಜನರ ನಡುವಿನ ಸಂಬಂಧ ಹಾಗೂ ಸಂಸ್ಕೃತಿಯ ಸಂಪರ್ಕಗಳಿಂದ ನಿರೂಪಿಸಲ್ಪಟ್ಟ ಸ್ನೇಹ ಮತ್ತು ಸಹಕಾರದ ವಿಶಿಷ್ಟ ಬಾಂಧವ್ಯ ಹಂಚಿಕೊಂಡಿವೆ. ಭಾರತ ಮತ್ತು ನೇಪಾಳ ಎರಡೂ ವಿವಿಧ ಪ್ರಾದೇಶಿಕ ವೇದಿಕೆಗಳಲ್ಲಿ ಅಂದರೆ ಸಾರ್ಕ್, ಬಿಮ್ ಸ್ಟೆಕ್ ಮತ್ತು ಜಾಗತಿಕ ವೇದಿಕೆಗಳಲ್ಲಿ ಒಟ್ಟಾಗಿ ಶ್ರಮಿಸುತ್ತಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!