ಹುಟ್ಟೂರು ಕರಾವಳಿಗೆ ಕಾಲಿಟ್ಟರು ಕಾಮನ್‌ವೆಲ್ತ್ ಕ್ರೀಡಾಕೂಟದ ಕಂಚಿನ ಹುಡುಗ!!

ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಮನ್‌ವೆಲ್ತ್ ಕ್ರೀಡಾಕೂಟದ 61 ಕೆಜಿ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ವಿಜೇತ ಕುಂದಾಪುರದ ಗುರುರಾಜ್ ಪೂಜಾರಿ ಹುಟ್ಟೂರು ಕರಾವಳಿಗೆ ಕಾಲಿಟ್ಟಿದ್ದು ಅವರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಅದ್ದೂರಿಯ ಸ್ವಾಗತ ನೀಡಲಾಯಿತು.
ಈ ಸಂದರ್ಭ ಮಾತನಾಡಿದ ಅವರು, ಸಮರ್ಪಣಾ ಮನೋಭಾವ, ಕಠಿಣ ಪರಿಶ್ರಮ, ಪ್ರಾಮಾಣಿಕ ಪ್ರಯತ್ನ ಇದ್ದರೆ ಯಾವುದೇ ಸಾಧನೆ ಸಾಧ್ಯ. ಕಿರಿಯ ವಯಸ್ಸಿನಲ್ಲೇ ನಿಮ್ಮ ಆಸಕ್ತಿಯ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರೊಂದಿಗೆ ಸಾಧನೆ ಖಂಡಿತಾ ಸಾಧ್ಯವಿದೆ ಎಂದರು.
ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಎಲ್ಲಾ ಕ್ರೀಡಾಪಟುಗಳು ಉತ್ತಮ ಸಾಧನೆ ತೋರುತ್ತಿದ್ದಾರೆ. ಈ ಬಾರಿ ಹೆಚ್ಚಿನ ಪದಕಗಳು ಭಾರತಕ್ಕೆ ಸಿಗಬಹುದೆಂಬ ವಿಶ್ವಾಸವಿದೆ. ಅಲ್ಲದೆ ರ್‍ಯಾಂಕಿಂಗ್‌ನಲ್ಲಿಯೂ ಉನ್ನತ ಸಾಧನೆ ಭಾರತದ್ದಾಗಬಹುದು ಎಂದವರು ಇದೇ ಸಂದರ್ಭದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!