ಬೇಡ್ತಿ ನದಿಗೆ ಮೀನು ಹಿಡಿಯಲು ಹೋಗಿ ನೀರಿನಲ್ಲಿ ಮುಳುಗಿದ ಸಹೋದರರು: ಓರ್ವನ ಶವ ಪತ್ತೆ

 ಹೊಸದಿಗಂತ ವರದಿ, ಯಲ್ಲಾಪುರ :

ಬೇಡ್ತಿ ನದಿಗೆ ಮೀನು ಹಿಡಿಯಲು ಹೋಗಿ ಹಿಂದಿರುಗುವ ಸಂದರ್ಭದಲ್ಲಿ ನೀರಿನಲ್ಲಿ ಮುಳುಗಿ ಕಾಣೆಯಾಗಿದ್ದ ಸಹೋದರರಿಬ್ಬರಲ್ಲಿ ಓರ್ವನ ಶವ ಸೋಮವಾರ ಪತ್ತೆಯಾಗಿದೆ.

ತಾಲೂಕಿನ ಶಿರನಾಲ ಮಾದನಸರದ ಮಹ್ಮದ್ ರಫೀಕ್ ಸಾಬ್ ಸೈಯದ್ (27) ಮತ್ತು ಮಹ್ಮದ್ ಹನೀಫ್ ಸಾಬ್ ಸೈಯದ್ (25) ಕಾಣೆಯಾದವರಾಗಿದ್ದು, ಭಾನುವಾರ ಬೆಳಗ್ಗೆ ಕವಲಗಿ ಹಳ್ಳ ದಾಟಿ ಬೇಡ್ತಿ ನದಿಗೆ ಮೀನು ಹಿಡಿಯಲು ತೆರಳಿದ್ದರು. ಸಂಜೆ ಮೀನು ಹಿಡಿದು ವಾಪಸು ಬರುತ್ತಿರುವಾಗ ಕವಲಗಿ ಹಳ್ಳದಲ್ಲಿ ಒಮ್ಮೆಲೆ ನೀರು ಹೆಚ್ಚಾದರಿಂದ ಹಳ್ಳದ ಮಧ್ಯದಲ್ಲಿದ್ದ ಇಬ್ಬರೂ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿರುವ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಘಟನೆ ನಡೆದ ವೇಳೆಯಿಂದ ಪೊಲೀಸ್ ಮತ್ತು ಅಗ್ನಿಶಾಮಕ ದಳದವರು ಸೇರಿ ಹಳ್ಳದಲ್ಲಿ ಹುಡುಕಾಟ ಆರಂಭಿಸಿದ್ದರು. ಸೋಮವಾರ ಘಟನೆ ನಡೆದ ಸ್ಥಳದಿಂದ 300 ಮೀ. ದೂರದಲ್ಲಿ ಅಣ್ಣ ಮಹಮ್ಮದ ರಫೀಖ್ ಶವ ಪತ್ತೆಯಾಗಿದ್ದು ಅವನ ತಮ್ಮ ಮಹಮ್ಮದ್ ಹನೀಫ್ ಇನ್ನೂ ಸಹ ಪತ್ತೆಯಾಗಿಲ್ಲ.

ಸ್ಥಳಕ್ಕೆ ಶಿರಸಿ ಉಪವಿಭಾಗದ ಡಿ.ಎಸ್.ಪಿ. ಗೀತಾ ಪಾಟೀಲ, ಸಿಪಿಐ ರಮೇಶ ಹಾನಾಪುರ, ಪಿ.ಎಸ್.ಐ. ಯಲ್ಲಾರಲಿಂಗ ಕುನ್ನೂರು, ಸಿದ್ದಪ್ಪ ಗುಡಿ, ಹಾಗೂ ಸಿಬ್ಬಂದಿಗಳು ಅಗ್ನಿಶಾಮಕ ಸಿಬ್ಬಂದಿಗಳು ಉಪಸ್ಥಿತರಿದ್ದು ಶೋಧ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಇನ್ನೊಬ್ಬನ ಶೋಧ ಕಾರ್ಯಾಚರಣೆ ಮುಂದುವರೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!