ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರ ಸಹೋದರನ ಪುತ್ರ ಎರಡು ದಿನಗಳಿಂದ ನಾಪತ್ತೆಯಾಗಿದ್ದು, ಈವರೆಗೆ ಪತ್ತೆಯಾಗಿಲ್ಲ.
ತಮ್ಮ ಸಹೋದರನ ಪುತ್ರನನ್ನು ನೆನೆದು ಶಾಸಕ ಎಂ.ಪಿ ರೇಣುಕಾಚಾರ್ಯ ಚಂದ್ರು ಎಲ್ಲಿದ್ದೀಯಾ ಬಾರೋ ಎಂಬುದಾಗಿ ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟಿದ್ದಾರೆ.
ಭಾನುವಾರ ಸಂಜೆ ಶಿವಮೊಗ್ಗ ಜಿಲ್ಲೆಯ ಗೌರಿಗದ್ದೆಯಲ್ಲಿ ವಿನಯ್ ಗುರೂಜಿಯವರನ್ನು ಹಾಗೂ ಸ್ನೇಹಿತ ಕಿರಣ್ ಅವರನ್ನುಶಾಸಕ ಎಂ.ಪಿ ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಭೇಟಿಯಾಗಿದ್ದಾರೆ. ಅಲ್ಲಿಂದ ರಾತ್ರಿ 11.56ಕ್ಕೆ ವಾಪಾಸ್ ಆಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಲ್ಲದೇ ಸೋಮವಾರ ಬೆಳಿಗ್ಗೆ 6.48ಕ್ಕೆ ಅವರ ಮೊಬೈಲ್ ಲಾಸ್ಟ್ ಲೊಕೇಶನ್ ತೋರಿಸುತ್ತಿದೆ.
ಇತ್ತ ಚಂದ್ರಶೇಖರ್ ಹುಡುಕಾಟದಲ್ಲಿ ಪೊಲೀಸರು ತೊಡಗಿದ್ದಾರೆ. ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ ಸೇರಿದಂತೆ ವಿವಿಧೆಡೆ ಹುಡುಕಾಡುತ್ತಿದ್ದಾರೆ.
ಇನ್ನೂ ಶಾಸಕರ ಸಹೋದರ ರಮೇಶ್, ತಮ್ಮ ಪುತ್ರ ಚಂದ್ರಶೇಖರ್ ನಾಪತ್ತೆಯಾಗಿರೋದನ್ನು ಯೋಚಿಸುತ್ತಾ ತಲೆಯ ಮೇಲೆ ಕೈಹೊತ್ತು ಅಳುತ್ತಿರೋದನ್ನು ಗಮನಿಸಿದ ಶಾಸಕ ಎಂ.ಪಿ ರೇಣುಕಾಚಾರ್ಯ ಚಂದ್ರು ಎಲ್ಲಿದ್ದೀಯ ಬಾರೋ ಎಂಬುದಾಗಿ ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟರು.