ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ಗೆ ಸಂಪೂರ್ಣ ಬೆಂಬಲ ಘೋಷಿಸಿದ ಬಿಆರ್‌ಎಸ್: ಕೆಸಿಆರ್‌ಗೆ ಧನ್ಯವಾದ ಅರ್ಪಿಸಿದ ಎಚ್‌ಡಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಜನತಾ ದಳ (ಜಾತ್ಯತೀತ) ನಾಯಕ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು, ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬೆಂಬಲಿಸುವ ಭರವಸೆ ನೀಡಿರುವ ತೆಲಂಗಾಣ ಮುಖ್ಯಮಂತ್ರಿ ಮತ್ತು ಭಾರತೀಯ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮುಖ್ಯಸ್ಥ ಕೆ ಚಂದ್ರಶೇಖರ್ ರಾವ್ ಅವರಿಗೆ ಧನ್ಯವಾದ ಹೇಳಿದ್ದಾರೆ.
ತೆಲಂಗಾಣ ಸಿಎಂ ಕೆಸಿಆರ್ ಅವರ ಬೆಂಬಲವು ‘ರಾಷ್ಟ್ರೀಯ ರಾಜಕೀಯದಲ್ಲಿ ಹೊಸ ಸಮೀಕರಣ’ವನ್ನು ಸೃಷ್ಟಿಸುತ್ತದೆ ಎಂದು ಕುಮಾರಸ್ವಾಮಿ ಹೇಳಿದರು.
ಕೆಸಿಆರ್ ಅವರ ತೆಲಂಗಾಣ ರಾಷ್ಟ್ರ ಸಮಿತಿಯ ಹೆಸರನ್ನು ಭಾರತೀಯ ರಾಷ್ಟ್ರ ಸಮಿತಿ ಎಂದು ಘೋಷಿಸುವ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಭಾಗವಹಿಸಿದ್ದರು.
“ಬಿಆರ್‌ಎಸ್‌ನ ಪ್ರಾರಂಭವು ಭಾರತದ ರಾಜಕೀಯದಲ್ಲಿ ಮಹೋನ್ನತ ಮೈಲಿಗಲ್ಲು. ಈ ಪಕ್ಷವು ತುಳಿತಕ್ಕೊಳಗಾದ, ದೀನದಲಿತ ಮತ್ತು ಕೃಷಿ ಕಾರ್ಮಿಕರ ಧ್ವನಿಯಾಗಿ ಕೆಲಸ ಮಾಡುತ್ತದೆ. ಮುಂದಿನ ಕರ್ನಾಟಕ ಚುನಾವಣೆಯಲ್ಲಿ ಸಂಪೂರ್ಣ ಸಹಕಾರ ನೀಡುವುದಾಗಿ ಘೋಷಿಸಿದ ಕೆಸಿಆರ್‌ಗೆ ಕೃತಜ್ಞತೆಗಳು” ಎಂದು ಕುಮಾರಸ್ವಾಮಿ ಹೇಳಿದರು.
ಕರ್ನಾಟಕ ಮತ್ತು ತೆಲಂಗಾಣ ಎರಡೂ ಚುನಾವಣೆಗಳು ಈ ವರ್ಷ ನಡೆಯಲಿವೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಕೆಸಿಆರ್, “ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ಹೋರಾಡಲು ಜೆಡಿಎಸ್‌ಗೆ ಬಿಆರ್‌ಎಸ್ ಸಹಾಯ ಮಾಡುತ್ತದೆ. ಎಚ್‌ಡಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯಾಗಿ ನೋಡುತ್ತೇವೆ ಎಂಬ ವಿಶ್ವಾಸ ನಮಗಿದೆ. ನಮ್ಮ ಪಕ್ಷ ನಿಮೊಂದಿಗೆ ಕರ್ನಾಟಕಕ್ಕೆ ಬಂದು ಪ್ರಚಾರದಲ್ಲಿ ಪಾಲ್ಗೊಳ್ಳುತ್ತದೆ. ಜೆಡಿಎಸ್ ಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದ್ದಾರೆ.
ಬಿಆರ್‌ಎಸ್, ಜೆಡಿಎಸ್‌ ಸೇರಿದಂತೆ ಹಲವು ಪ್ರಾದೇಶಿಕ ಪಕ್ಷಗಳು ರಾಷ್ಟ್ರೀಯ ರಾಜಕೀಯದಲ್ಲಿ ‘ಮೂರನೇ ರಂಗ’ವನ್ನು ಒಟ್ಟಿಗೆ ಸೇರಿಸಲು ಪ್ರಯತ್ನಿಸುತ್ತಿವೆ. ಇವು ಬಿಜೆಪಿ ಮತ್ತು ಕಾಂಗ್ರೆಸ್ ವಿರೋಧಿ ವೇದಿಕೆಯಲ್ಲಿ ಬರುತ್ತದೆ. ಗುರುವಾರ ಚುನಾವಣಾ ಆಯೋಗ ಕೆಸಿಆರ್‌ ಅವರ ಪಕ್ಷದ ಪಕ್ಷದ ಹೆಸರು ಬದಲಾವಣೆಗೆ ಅನುಮೋದನೆ ನೀಡಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!