ತೆಲಂಗಾಣ ಸರ್ಕಾರ, ಸಿಎಂ ರೇವಂತ್ ರೆಡ್ಡಿ ವಿರುದ್ಧ BRS ನಾಯಕರಿಂದ ಪ್ರತಿಭಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೇವಂತ್ ರೆಡ್ಡಿ ನೇತೃತ್ವದ ತೆಲಂಗಾಣ ಸರ್ಕಾರ ಕಳೆದ 15 ತಿಂಗಳಲ್ಲಿ ಪಡೆದಿರುವ 1.5 ಲಕ್ಷ ಕೋಟಿ ರೂ. ಸಾಲದ ವಿರುದ್ಧ ಎಂಎಲ್‌ಸಿ ಕೆ. ಕವಿತಾ ನೇತೃತ್ವದ ಭಾರತ ರಾಷ್ಟ್ರ ಸಮಿತಿ ಇಂದು ತೆಲಂಗಾಣ ವಿಧಾನ ಪರಿಷತ್ತಿನಲ್ಲಿ ಪ್ರತಿಭಟನೆ ನಡೆಸಿದೆ.

ಮುಖ್ಯಮಂತ್ರಿ ರೇವಂತ್ ರೆಡ್ಡಿ ರಾಜ್ಯದ ಸಾಲ ಸ್ವಾಧೀನಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿರುವ ಅವರು, ಕಳೆದ 15 ತಿಂಗಳಲ್ಲಿ ತೆಗೆದುಕೊಂಡಿರುವ ಸಾಲಗಳ ಕುರಿತು ಸರ್ಕಾರ ಶ್ವೇತಪತ್ರ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.

ಕೆ. ಚಂದ್ರಶೇಖರ ರಾವ್ ನೇತೃತ್ವದ ಹಿಂದಿನ ಸರ್ಕಾರ ತೆಗೆದುಕೊಂಡಿರುವ ಸಾಲಗಳನ್ನು ತೀರಿಸಲು 1.58 ಲಕ್ಷ ಕೋಟಿ ರೂ. ಸಾಲವನ್ನು ಪಡೆದುಕೊಂಡಿದೆ ಎಂದು ಇತ್ತೀಚೆಗೆ ಪ್ರತಿಪಾದಿಸಿದಾಗ ರೆಡ್ಡಿ ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ ಎಂದು ಕವಿತಾ ಹೇಳಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!