ಬೆಂಗಳೂರಲ್ಲಿ ಭೀಕರ ಮರ್ಡರ್: ದುಷ್ಕರ್ಮಿಗಳಿಂದ ಉದ್ಯಮಿಯ ಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಲ್ಲಿ ಬಿಜಿಎಸ್‌ ಲೇಔಟ್‌ನ ನಿರ್ಮಾಣ ಹಂತದ ಕಟ್ಟಡದಲ್ಲಿ ಉದ್ಯಮಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಕೊಲೆಯಾದ ಉದ್ಯಮಿಯನ್ನು ಲೋಕನಾಥ್‌ ಸಿಂಗ್‌ (37) ಎಂದು ತಿಳಿದುಬಂದಿದೆ.

ಈ ತಿಂಗಳಲ್ಲಿ ಕೊಲೆಯಾದ ಲೋಕನಾಥ್‌ ಸಿಂಗ್ ಗೆ ಮದುವೆ ನಿಶ್ಚಯವಾಗಿತ್ತು. ಆದರೆ ಇದೀಗ ದುಷ್ಕರ್ಮಿಗಳ ಕೈಯಿಂದ ಬರ್ಬರವಾಗಿ ಕೊಲೆಯಾಗಿದ್ದು, ಕೊಲೆಯಾದ ಬಳಿಕ ಲೋಕನಾಥ್‌ ಗನ್‌ಮ್ಯಾನ್‌ ನಾಪತ್ತೆಯಾಗಿದ್ದ. ನಂತರ ಪೊಲೀಸ್‌ ಠಾಣೆಯಲ್ಲಿ ಪ್ರತ್ಯಕ್ಷನಾಗಿದ್ದಾನೆ. ಸದ್ಯ ಪೊಲೀಸರು ಈತನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!