ಹೊಸದಿಗಂತ ಡಿಜಿಟಲ್ ಡೆಸ್ಕ್:
ಯುವಕನೊಬ್ಬನನ್ನು ದುಷ್ಕರ್ಮಿಗಳು ನಡೆರಸ್ತೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ತಡರಾತ್ರಿ ನಡೆದಿದೆ.
ಮೃತ ಯುವಕನನ್ನು ರಾಮನಗರ ನಿವಾಸಿ ನಾಗರಾಜ್ ಗಾಡಿವಡ್ಡರ್ (26) ಎಂದು ಗುರುತಿಸಲಾಗಿದೆ.
ಬೆಳಗಾವಿಯ ಶಿವಬಸವನಗರದಲ್ಲಿ ರಾತ್ರಿ ವೇಳೆ ನಾಗರಾಜ್ ನಡೆದುಕೊಂಡು ಬರುತ್ತಿರುವ ವೇಳೆ ಹಿಂಬಾಲಿಸಿಕೊಂಡು ಬಂದ ಮೂವರು ದುಷ್ಕರ್ಮಿಗಳು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.