ಪಕ್ಷಕ್ಕೆ ದ್ರೋಹ ಬಗೆದವರಿಗೆ ತಕ್ಕ ಪಾಠ ಕಲಿಸುವಂತೆ ಬಿ.ಎಸ್‌.ಯಡಿಯೂರಪ್ಪ ಮನವಿ

ಹೊಸದಿಗಂತ ವರದಿ ಕಲಬುರಗಿ:‌ 

ಭಾರತೀಯ ಜನತಾ ಪಕ್ಷದಿಂದ ಆಯ್ಕೆಯಾಗಿ, ತದನಂತರ ಸಚಿವ ಸ್ಥಾನ ಅನುಭವಿಸಿ, ಪಕ್ಷವನ್ನು ತೊರೆದು ಹೋಗಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರೇವೂನಾಯಕ್ ಬೆಳಮಗಿಯನ್ನು ತಾವೆಲ್ಲರೂ ಸೋಲಿಸಲು ಪಣ ತೊಡಬೇಕೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದರು.

ಶುಕ್ರವಾರ ಕಲಬುರಗಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ, ಬಿಜೆಪಿ ಅಭ್ಯರ್ಥಿ ಬಸವರಾಜ ಮತ್ತಿಮಡು ಪರ ಮತಯಾಚನೆ ಮಾಡಿ ಮಾತನಾಡಿದ ಅವರು, ಮೇ.10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಸವರಾಜ ಮತ್ತಿಮಡು ಅವರನ್ನು 25000 ಮತಗಳ ಅಂತರದಿಂದ ತಾವೆಲ್ಲರೂ ಗೆಲ್ಲಿಸಿಕೊಡಬೇಕು.

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಅನುದಾನವನ್ನು ಸಮಪ೯ಕವಾಗಿ ಬಳಕೆ ಮಾಡಿಕೊಂಡು, ಗ್ರಾಮೀಣ ಭಾಗದಲ್ಲಿ ಮತ್ತಿಮಡು ಅವರು ಸುಮಾರು 1500 ಸಾವಿರ ಕೋಟಿ ರೂಪಾಯಿಯ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಹೀಗಾಗಿ ಕಾಂಗ್ರೆಸ್ ತಕ್ಕ ಪಾಠ ಕಲಿಸುವ ಮೂಲಕ ತಾವೆಲ್ಲರೂ ಮತ್ತೊಮ್ಮೆ ಬಿಜೆಪಿ ಶಕ್ತಿ ಹೆಚ್ಚಿಸಬೇಕು ಎಂದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖಗೆ೯ ಅವರು ದೇಶದ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಟ್ಟು, ತಮ್ಮ ಸ್ಥಾನ ಮಾನದ ಬಗ್ಗೆ ಯೋಚಿಸಿ ಮಾತನಾಡಬೇಕು ಎಂದ ಅವರು, ಕೂಡಲೇ ದೇಶದ ಜನತೆಗೆ ಕ್ಷಮೆ ಕೇಳಬೇಕು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!