ಬಿಜೆಪಿ ಜನಸಂಕಲ್ಪ ಯಾತ್ರೆ ಬಿಟ್ಟು ದಿಢೀರ್ ದೆಹಲಿಗೆ ಹೋದ ಬಿ.ಎಸ್.ಯಡಿಯೂರಪ್ಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಿಜೆಪಿ ಜನಸಂಕಲ್ಪ ಯಾತ್ರೆ ನಡುವೆಯೇ ದಿಢೀರ್ ದೆಹಲಿಗೆ ದೌಡಾಯಿಸಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ಬೀದರ್ ನ ಔರಾದ್ ನಲ್ಲಿ ಬಿಜೆಪಿ ಜನಸಂಕಲ್ಪ ಬೃಹತ್ ಸಮಾವೇಶ ನಡೆಯುತ್ತಿದ್ದು, ಬೀದರ್ ಗೆ ತೆರಳದೇ ಯಡಿಯೂರಪ್ಪ ದೆಹಲಿಗೆ ಪ್ರಯಾಣಿಸಿದ್ದಾರೆ.
ಈ ಬಗ್ಗೆ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಚುನಾವಣಾ ಸಮಿತಿ ಸಭೆ ಹಿನ್ನೆಲೆಯಲ್ಲಿ ಆಗಮಿಸಿದ್ದಾಗಿ ತಿಳಿಸಿದ್ದಾರೆ.
ಬಿಜೆಪಿ ಜನಸಂಕಲ್ಪ ಯಾತ್ರೆಗೆ ಅಭೂತಪೂರ್ವ ಸ್ಪಂದನೆ ಸಿಗುತ್ತಿದೆ. ಬೀದರ್ ನ ಔರಾದ್ ನಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ ಕೇಂದ್ರ ಚುನಾವಣಾ ಸಮಿತಿ ಮೊದಲ ಸಭೆ ಹಿನ್ನೆಲೆಯಲ್ಲಿ ಜನಸಂಕಲ್ಪ ಯಾತ್ರೆ ಮೊಟಕುಗೊಳಿಸಿ ಬಂದಿದ್ದೇನೆ. ಇದು ಪ್ರಮುಖ ಸಭೆಯಾಗಿರುವುದರಿಂದ ಸಭೆಯಲ್ಲಿ ಭಾಗಿಯಾಗುತ್ತಿದ್ದೇನೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!